Advertisement

ಬೆಳ್ತಂಗಡಿ: ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

08:34 AM Jan 07, 2022 | Team Udayavani |

ಬೆಳ್ತಂಗಡಿ: ಮುಂಡಾಜೆಯಿಂದ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ರಾತ್ರಿ 11 ಗಂಟೆ ಸುಮಾರಿಗೆ ನಡೆದ ರಸ್ತೆ ಅವಘಡದಲ್ಲಿ ಕೊಯ್ಯುರು ನಿವಾಸಿ ರಘು ಎಂಬವರು ದಾರುಣವಾಗಿ ಮೃತಪಟ್ಟಿದ್ದಾರೆ.

Advertisement

ವಿದ್ಯುತ್ ಕಂಬಕ್ಕೆ ಹುಲ್ಲು ಸಾಗಾಟದ ಪಿಕಪ್ ವಾಹನ ಢಿಕ್ಕಿಯಾದ ಪರಿಣಾಮ ನಾಲ್ಕೈದು ವಿದ್ಯುತ್ ಕಂಬಗಳು ತುಂಡಾಗಿ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿತ್ತು. ಈ ವೇಳೆ ಇದರ ಅರಿವಿಲ್ಲದೆ ಸ್ಕೂಟರ್ ನಲ್ಲಿ ದಿಡುಪೆ ಕಡೆಯಿಂದ ಬರುತ್ತಿದ್ದ ಉಜಿರೆ ಕಾಲೇಜು ರಸ್ತೆಯ ಹೋಟೆಲ್ ಮಂಜುನಾಥ್ ನ ರಘು ಅವರ ಕುತ್ತಿಗೆಗೆ ತಂತಿಗಳು ಸಿಕ್ಕಿಕೊಂಡು ರಸ್ತೆಗೆಸೆಯಲ್ಪಟ್ಟ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ರಸ್ತೆಯಲ್ಲಿ ಸಿಕ್ಕಿದ 10ಸಾವಿರ ರೂ. ಮರಳಿಸಿದ ವಿದ್ಯಾರ್ಥಿನಿಯರು :ಶಿಕ್ಷಣ ಸಚಿವರಿಂದ ಪ್ರಶಂಸೆ

ಅಪಘಾತದ ವೇಳೆ ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತೇ ಎಂಬ ನಿಖರ ಮಾಹಿತಿ ಲಭಿಸಿಲ್ಲ.

Advertisement

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next