Advertisement

ಗುಡಿಸಲಿಗೆ ಆಕಸ್ಮಿಕ ಬೆಂಕಿ: ಮಲಗಿದ್ದಲ್ಲೇ ವ್ಯಕ್ತಿ ಸಜೀವ ದಹನ

01:35 PM Apr 03, 2022 | Team Udayavani |

ಗಂಗೊಳ್ಳಿ: ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಲಗಿದ್ದ ವ್ಯಕ್ತಿಯೊಬ್ಬರು ಸಜೀವ ದಹನಗೊಂಡ ಧಾರುಣ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಭಾನುವಾರ ಸಂಭವಿಸಿದೆ.

Advertisement

ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (42) ಮೃತಪಟ್ಟವರು.

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಭಾನುವಾರ ಬೆಳಗ್ಗೆ ಗಂಗೊಳ್ಳಿ ಬಂದರಿನಲ್ಲಿರುವ ಬೋಟಿನ ಸಮೀಪ ಹೋಗಿ ಮತ್ತೆ ಮನೆಯಲ್ಲಿ ಬಂದು ಮಲಗಿದ್ದರು. ಈ ಸಂದರ್ಭ ಬೆಳಗ್ಗೆ ಸುಮಾರು 8.30ರ ಹೊತ್ತಿಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗಣೇಶ ಖಾರ್ವಿ ಮಂಚದ ಮೇಲೆ ಮಲಗಿದ್ದಲ್ಲೆ ಸುಟ್ಟು ಸಜೀವ ದಹನಗೊಂಡಿದ್ದಾರೆ.

ಮೃತ ಗಣೇಶ್ ಹೊಸ ಮನೆ ಕಟ್ಟುತ್ತಿದ್ದು ಮನೆ ಸಮೀಪದಲ್ಲೇ ಪುಟ್ಟ ಗುಡಿಸಲಿನಲ್ಲಿ ಪತ್ನಿ ಜೊತೆ ವಾಸಿಸುತ್ತಿದ್ದರು. ಇವರ ಪತ್ನಿ ಬೆಳಗ್ಗೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ:ಮಹಿಳೆಗೆ ಹಲ್ಲೆ ಪ್ರಕರಣ: ಆಸಿಫ್ ಆಪದ್ಭಾಂಧವ ಸೇರಿ ಮೂವರ ಬಂಧನ

Advertisement

ಗಣೇಶ್ ಖಾರ್ವಿ ಮನೆಯಲ್ಲಿ ಕಾಣಿಸಿಕೊಂಡ ದಟ್ಟ ಹೊಗೆಯನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಮನೆಗೆ ತಗುಲಿದ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದು, ಆದರೆ ಗಣೇಶ ಖಾರ್ವಿ ಅವರು ಮನೆಯೊಳಗೆ ಇರುವುದು ಯಾರಿಗೂ ತಿಳಿದಿರಲಿಲ್ಲ. ಬಳಿಕ ಸ್ಥಳೀಯರು ಮನೆಗೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next