Advertisement

Puttur;ಅಪಘಾತದ ಗಾಯಾಳು ಸಾವು: ಅಂಗಾಂಗ ದಾನ

11:27 PM Jan 08, 2024 | Team Udayavani |

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿ. 31ರಂದು ದ್ವಿಚಕ್ರ ವಾಹನ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದ್ವಿಚಕ್ರ ವಾಹನದ ಸಹಸವಾರ ಜ. 7ರಂದು ಮೃತಪಟ್ಟಿದ್ದಾರೆ.

Advertisement

ಇರ್ದೆ ಗ್ರಾಮದ ಉಪ್ಪಳಿಗೆ ನಾರಾಯಣ ನಾಯ್ಕ ಮತ್ತು ಕಲ್ಯಾಣ ದಂಪತಿಯ ಪುತ್ರ ಪ್ರವೀಣ್‌ (18) ಮೃತರು. ಡಿ. 31ರಂದು ರಾತ್ರಿ ಪರಿಚಿತರೊಂದಿಗೆ ಪುತ್ತೂರಿಗೆ ಬಂದಿದ್ದ ಪ್ರವೀಣ್‌ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಪುತ್ರ ಶೋಕದ ನಡುವೆಯೂ ಮೃತರ ಹೆತ್ತವರು ಪ್ರವೀಣ್‌ ಅವರ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next