Advertisement

ಯುಪಿಯಲ್ಲಿ ಭೀಕರ ಅಪಘಾತ: 22 ಸಾವು,17 ಮಂದಿಗೆ ಗಂಭೀರ ಗಾಯ 

09:08 AM Jun 05, 2017 | |

ಬರೇಲಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 24ರಲ್ಲಿ  ಸೋಮವಾರ ಬೆಳಗಿನ ಜಾವ ಬಸ್‌ ಮತ್ತು ಸರಕು ಸಾಗಿಸುತ್ತಿದ್ದ ಲಾರಿ ಮುಖಾಮುಖೀ ಢಿಕ್ಕಿಯಾಗಿ ಬೆಂಕಿ ಹೊತ್ತಿ ಉರಿದ್ದಿದ್ದು, 22 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದು,17 ಮಂದಿ ಗಂಭೀರ ವಾಗಿ ಗಾಯಗೊಂಡ ಭೀಕರ ದುರಂತ ಸಂಭವಿಸಿದೆ. 

Advertisement

ಅಪಘಾತವಾಗುತ್ತಿದ್ದಂತೆ ಬಸ್‌ ಹೊತ್ತಿ ಉರಿದಿದ್ದು ನಿದ್ರೆಯಲ್ಲಿದ್ದ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಬಸ್‌ನಿಂದ ಹೊರ ಬರಲು ಸಾಧ್ಯವಾಗದೆ ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಬಸ್‌ ಚಾಲಕನ ಅತೀಯಾದ ವೇಗವೆ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. 

ತಲಾ 2 ಲಕ್ಷ ರೂ. ಪರಿಹಾರ 
ದುರ್ಘ‌ಟನೆಯ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಧನ ಘೋಷಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next