Advertisement

ರಾಣೆಬೆನ್ನೂರಿನಲ್ಲಿ ಖಾತೆ ತೆರೆದ ಕೆಪಿಜೆಪಿ; ಪಕ್ಷೇತರ ಅಭ್ಯರ್ಥಿಗೆ ಜಯ

02:16 PM May 15, 2018 | Team Udayavani |

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಪಕ್ಷೇತರ ಹಾಗೂ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಅಭ್ಯರ್ಥಿಯೊಬ್ಬರು ಜಯಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.

Advertisement

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಜೆಪಿ ಪಕ್ಷದ ಅಭ್ಯರ್ಥಿ ಆರ್ ಶಂಕರ್ ಗೆಲುವಿನ ನಗು ಬೀರಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಹಿರಿಯ ಮುಖಂಡ ಕೆಬಿ ಕೋಳಿವಾಡ ಸೋಲಿನ ರುಚಿ ಕಂಡಿದ್ದಾರೆ.

2008ರಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಶಿವಣ್ಣ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಕಾಂಗ್ರೆಸ್ ನ ಕೆಬಿ ಕೋಳಿವಾಡ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.

ಮುಳಬಾಗಿಲು ಕ್ಷೇತ್ರದಲ್ಲಿ ಎಚ್ ನಾಗೇಶ್ ಗೆಲುವು:

ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಎಚ್.ನಾಗೇಶ್ ಅವರು ಜೆಡಿಎಸ್ ನ ಸಮೃದ್ಧಿ ಮಂಜುನಾಥ್ ಅವರ ವಿರುದ್ಧ ಗೆಲುವಿನ ನಗು ಬೀರಿದ್ದಾರೆ.

Advertisement

2013ರಲ್ಲಿ ಕಾಂಗ್ರೆಸ್ ಪಕ್ಷದ ಜಿ.ಮಂಜುನಾಥ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಪಕ್ಷೇತರ ಅಭ್ಯರ್ಥಿ ಅಮರೇಶ್ ಜಯ ಸಾಧಿಸಿ ಶಾಸಕರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next