Advertisement

ರಬಕವಿಯ ಕಂಠಿ ಬಸವೇಶ್ವರ ದೇವಸ್ಥಾನದ ಹತ್ತಿರ ಗಾಂಜಾ ವಶ, ಇಬ್ಬರ ಬಂಧನ

03:41 PM Jul 12, 2022 | Team Udayavani |

ರಬಕವಿ-ಬನಹಟ್ಟಿ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಹೊರಟಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ತೇರದಾಳ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಮೂಡಲಗಿ ತಾಲೂಕಿನ ಅರಳಿಮಟ್ಟಿ ಗ್ರಾಮದ ಈರಣ್ಣ ನಂದೆಪ್ಪ ಕುದರಿಮನಿ (20) ಹಾಗೂ ಮಂಜುನಾಥ ಸುಭಾಸ ಖಾನಪ್ಪನವರ (21) ಬಂಧಿತ ಆರೋಪಿಗಳು.

ತಾಲೂಕಿನ ರಬಕವಿಯ ಕಂಠೀ ಬಸವೇಶ್ವರ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಹೊರಟಿದ್ದ ವೇಳೆ ತೇರದಾಳ ಪಿಎಸ್‌ಐ ರವಿ ಪವಾರ ಅವರ ನೇತೃತ್ವದ ತಂಡ ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡು ಇಬ್ಬರು ಆರೋಪಿತರನ್ನು ಬಂಧಿಸಿದ್ದಾರೆ.

ಬಂಧಿತರಿಂದ 3000 ಮೌಲ್ಯದ 700 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಗ್ರೇಡ್-2 ತಹಶೀಲ್ದಾರ ಎಸ್. ಬಿ. ಕಾಂಬಳೆ, ಸಿಪಿಐ ಐ. ಎಂ. ಮಠಪತಿ, ಉಪತಹಶೀಲ್ದಾರ ಶ್ರೀಕಾಂತ ಮಾಯನ್ನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next