Advertisement

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

07:19 PM Oct 31, 2022 | Team Udayavani |

ಪುತ್ತೂರು: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

Advertisement

2019 ರಲ್ಲಿ ಪುತ್ತೂರಿನಲ್ಲಿ ಹೊಡೆದಾಟ ವಿಚಾರವಾಗಿ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದಲ್ಲಿ ಕಬಕ ಗ್ರಾಮದ ಪೋಳ್ಯ ನಿವಾಸಿ ಇರ್ಷಾದ್‌ ಅವರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಬಳಿಕ ಅವರು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ವಿದೇಶದಲ್ಲಿದ್ದರು. ನ್ಯಾಯಾಲಯ ಇರ್ಷಾದ್‌ ಅವರ ಮೇಲೆ ವಾರೆಂಟ್‌ ಜಾರಿ ಮಾಡಿತ್ತು. ಅ.28ರಂದು ಇರ್ಷಾದ್ ಅವರು ಸ್ವದೇಶಕ್ಕೆ ಮರಳುವ ಸಂದರ್ಭ ಪೊಲೀಸರು ಮಂಗಳೂರು ಬಜಪೆ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next