Advertisement

ಪುತ್ತೂರು: ನ್ಯಾಯಾಲಯದ ವಿಚಾರಣೆಗೆ ಬಾರದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

07:34 PM May 01, 2022 | Team Udayavani |

ಪುತ್ತೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲವು ಪ್ರಕರಣದ ಆರೋಪಿಯನ್ನು  ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

Advertisement

ಕಾಸರಗೋಡು ತಾಲೂಕಿನ ಚಟ್ಟಂಗಲ್ ಗ್ರಾಮದ ನಿವಾಸಿ ಮಹಮ್ಮದ್ ಕಬೀರ್ ನನ್ನು ಆತನ ನಿವಾಸದಲ್ಲಿ ದಸ್ತಗಿರಿ ಮಾಡಿ ರವಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಯು ವಿಚಾರಣೆಗೆ ಸತತ ಗೈರಾದ ಹಿನ್ನೆಲೆಯಲ್ಲಿ ಆರೋಪಿ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಹೊರಡಿಸಿತು. ಆರೋಪಿ ವಿರುದ್ಧ ಪುತ್ತೂರು ನಗರ ಠಾಣೆ,  ಸುಳ್ಯ,ಮಡಿಕೇರಿ, ಕೇರಳ    ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next