Advertisement

2002ರಲ್ಲಿ ಕೊಲೆ: ಗೋವಾ ಪೊಲೀಸರಿಂದ ಬೆಂಗಳೂರಿನಲ್ಲಿ ಆರೋಪಿ ಬಂಧನ

03:58 PM Jul 14, 2022 | Team Udayavani |

ಪಣಜಿ: 2002ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಶಂಕಿತ ಆರೋಪಿ ರಘು ಪಾನಿಪುರಿಯನ್ನು ಬೆಂಗಳೂರಿಗೆ ತೆರಳಿ ಗೋವಾ ಕುಂಕಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಪೊಲೀಸರು ತೀವ್ರ ತನಿಖಾ ಕಾರ್ಯ ಕೈಗೊಂಡಿದ್ದರು.

Advertisement

ಆರೋಪಿ ಬೆಂಗಳೂರಿನಲ್ಲಿ ಇರುವ ಬಗ್ಗೆ ರಹಸ್ಯ ಮಾಹಿತಿ ಪಡೆದ ಕುಂಕಳ್ಳಿ ಠಾಣೆ ಪೊಲೀಸರ ತಂಡ ಜುಲೈ 12ರಂದು ಬೆಂಗಳೂರಿಗೆ ತೆರಳಿತ್ತು. ಕುಂಕಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ತುಕಾರಾಂ ಚವ್ಹಾಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಶಂಕಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಚವಾಣ್ ಹೇಳಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳು ಭಾಗಿಯಾಗಿದ್ದರು. ಅವರಲ್ಲಿ ನಾಲ್ವರನ್ನು ಈಗಾಗಲೇ ಬಂಧಿಸಲಾಗಿತ್ತು. ಒಬ್ಬನೇ ಆರೋಪಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next