Advertisement

Puttur ಬಾಡಿ ವಾರೆಂಟ್‌ನಲ್ಲಿ ವಶಕ್ಕೆ ಪಡೆದಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರು

12:24 AM Nov 09, 2023 | Team Udayavani |

ಪುತ್ತೂರು: ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಯಾಗಿ ಜೈಲಿನಲ್ಲಿದ್ದ ಅಪರಾಧಿ ರವಿ ಎಂಬಾತನನ್ನು ಬಡಗನ್ನೂರಿನ ಕುದ್ಕಾಡಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ನ್ಯಾಯಾಲಯದಿಂದ ಬಾಡಿ ವಾರಂಟ್‌ ಮೂಲಕ ವಶಕ್ಕೆ ಪಡೆದುಕೊಂಡ ಗ್ರಾಮಾಂತರ ಪೊಲೀಸರು ನ. 8ರಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement

ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ಗುರುಪ್ರಸಾದ್‌ ರೈ ಕುದ್ಕಾಡಿ ಅವರ ಮನೆಯಲ್ಲಿ 2 ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೆರೋಲ್‌ನಲ್ಲಿ ಹೊರಗೆ ಬಂದಿದ್ದ ಅವಧಿಯಲ್ಲಿ ದರೋಡೆ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯಾಗಿದ್ದ ಕೇರಳದ ಇಚಿಲಂಕೋಡು ಕುಂಪಳ ಪಚ್ಚಂಬಳ ನಿವಾಸಿ ರವಿ ಎಂಬಾತನನ್ನು ಕಸ್ಟಡಿಗೆ ನೀಡಲು ಕಾರಾಗೃಹ ಅಧಿಕಾರಿಗಳಿಗೆ ಆದೇಶಿಸುವಂತೆ ಕೋರಿ ಪೊಲೀಸರು ಪುತ್ತೂರು ನ್ಯಾಯಾಲಯದಲ್ಲಿ ಬಾಡಿ ವಾರಂಟ್‌ ಅರ್ಜಿ ಸಲ್ಲಿಸಿದ್ದರು.

ದರೋಡೆ ಪ್ರಕರಣಕ್ಕೆ ರವಿ ಸಂಚು ರೂಪಿಸಿದ್ದ ವಿಚಾರವನ್ನು ಬಂಧಿತ ಇತರ ಆರೋಪಿಗಳು ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಬಾಡಿ ವಾರಂಟ್‌ ಅರ್ಜಿ ಸಲ್ಲಿಸಿದ್ದರು. ರವಿ ಈ ಹಿಂದೆ ಕಾಸರಗೋಡು ಜಬ್ಬಾರ್‌ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿ ಜೀವಾವಧಿ ಶಿಕ್ಷೆಗೊಳಗಾಗಿ ಕಣ್ಣೂರು ಸೆಂಟ್ರಲ್‌ ಜೈಲಿನಲ್ಲಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next