ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ನಿಜಾಮ್ (26 ವ) ಪರಾರಿಯಾಗಿರುವ ಆರೋಪಿ.
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿ ನಿಜಾಮ್ ನನ್ನು ಪೊಲೀಸರು ಬಂಧಿಸಿ ಠಾಣೆಯ ಸೆಲ್ ನಲ್ಲಿರಿಸಿದ್ದರು. ಆದರೆ ಠಾಣೆಯಲ್ಲಿ ಸಿಬ್ಬಂದಿಗಳು ಇಲ್ಲದ ಸಮಯ ನೋಡಿ ಆರೋಪಿ ನಿಜಾಮ್ ಲಾಕಪ್ ನಿಂದ ಎಸ್ಕೇಪ್ ಆಗಿದ್ದಾನೆ.
ಇದನ್ನೂ ಓದಿ:ಕ್ರೀಡಾ ಸಾಧನೆ ಮಾಡುವುದಾಗಿ ಪತ್ರ ಬರೆದಿಟ್ಟು ವಿದ್ಯಾರ್ಥಿಗಳು ನಾಪತ್ತೆ
ಠಾಣೆಯಿಂದಲೇ ಪರಾರಿಯಾಗಿರುವ ಆರೋಪಿಯನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.