Advertisement

ಮಂಗಳೂರು ಕೋಳಿ ಫಾರಂ ಸಿಬ್ಬಂದಿಗಳ ಮೇಲೆ ಹಲ್ಲೆ: ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ದಾಖಲು

10:04 AM Jul 20, 2022 | Team Udayavani |

ಮಂಗಳೂರು: ಇತ್ತಿಚೇಗೆ ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಕೋಳಿ ಅಂಗಡಿಯೊಂದರ ಸಿಬ್ಬಂದಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸರು ಗೂಂಡಾ ಕಾಯ್ದೆಯನ್ನು ದಾಖಲಿಸಿದ್ದಾರೆ.

Advertisement

ಆರೋಪಿಗಳಾದ ಜಲ್ಲಿಗುಡ್ಡೆ ಬಜಾಲ್‌ನ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಯೆಕ್ಕೂರಿನ ನಿವಾಸಿ ಧೀರು ಯಾನೆ ಧೀರಜ್ ಕುಮಾರ್ (27) ಕೊಲೆ ಯತ್ನ, ಅಪಹರಣ, ಕ್ರಿಮಿನಲ್ ಸಂಚು ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ: ಚಾರ್ಮಾಡಿ ಘಾಟ್: ಕೆಟ್ಟು ನಿಂತ ಇಂಧನ ಟ್ಯಾಂಕರ್ – ಅಂತರ್ ಜಿಲ್ಲಾ ಪ್ರಯಾಣಿಕರ ಪರದಾಟ

ಆರೋಪಿಗಳಿಬ್ಬರೂ ಸಮಾಜಕ್ಕೆ ಅಪಾಯಕಾರಿ ಎಂದು ಪರಿಗಣಿಸಲಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ  ಉದ್ದೇಶದಿಂದ ಅವರ ಮೇಲೆ ಗೂಂಡಾ ಕಾಯಿದೆಯನ್ನು ಹೊರಿಸಲಾಗಿದೆ ಎಂದು ಕಂಕನಾಡಿ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next