Advertisement

ಶಿವಮೊಗ್ಗ: ಬಂಧಿಸಲು ಹೋದ ಪೊಲೀಸ್‌ ಪೇದೆಗಳಿಗೆ ಚಾಕು ಇರಿದ ಆರೋಪಿ ಕಾಲಿಗೆ ಗುಂಡೇಟು

03:08 PM Jun 21, 2022 | Team Udayavani |

ಶಿವಮೊಗ್ಗ: ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಲು ಹೋಗಿದ್ದ ಪೊಲೀಸ್ ಪೇದೆಗಳಿಬ್ಬರಿಗೆ ಚಾಕು ಇರಿದ  ಘಟನೆ ಹಳೇ ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ.

Advertisement

ಲಷ್ಕರ್ ಮೊಹಲ್ಲಾ ನಿವಾಸಿ  ಶಾಹಿದ್ ಖುರೇಶಿ(22) ಚಾಕು ಇರಿದ ಆರೋಪಿ. ದೊಡ್ಡಪೇಟೆ ಠಾಣೆ ಸಿಬ್ಬಂದಿಗಳಾದ ಗುರುನಾಯ್ಕ್ ಹಾಗೂ ರಮೇಶ್ ಹಲ್ಲೆಗೊಳಗಾದವರು.

ಶಾಹಿದ್ ಖುರೇಶಿ ರೌಡಿ ಶೀಟರ್ ಅಗಿದ್ದು, ಪ್ರಕರಣವೊಂದರಲ್ಲಿ ಈತನನ್ನು ಬಂಧಿಸಲು ತೆರಳಿದ್ದಾಗ ಪೊಲೀಸ್ ಪೇದೆ ಎದೆಗೆ ಚಾಕು ಇರಿದಿದ್ದಾನೆ. ಪೊಲೀಸ್ ಹಿಡಿಯಲು ಹೋದಾಗ ಮತ್ತೆ ಲಾಂಗು ಬೀಸಿ ಪರಾರಿ ಆಗಲು ಯತ್ನಿಸಿದ ಸಂದರ್ಭದಲ್ಲಿ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಸದ್ಯ ಗಾಯಾಳು ಆರೋಪಿ ಮೆಗ್ಗಾನ್‌ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಚಾಕು ಇರಿತಕ್ಕೊಳಗಾದ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ‌ ಚಿಕಿತ್ಸೆಗಾಗಿ ನಗರದ ಸಹ್ಯಾದ್ರಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.ಎಸ್ಪಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು ಭೇಟಿ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next