Advertisement

ದತ್ತಪೀಠ ರಸ್ತೆಯಲ್ಲಿ ಮೊಳೆ ಸುರಿದ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸರೆಂಡರ್

12:11 PM Dec 18, 2022 | Team Udayavani |

ಚಿಕ್ಕಮಗಳೂರು: ದತ್ತಜಯಂತಿಗೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಪ್ರಕರಣ ತಲೆಮರೆಸಿಕೊಂಡಿದ್ದ ಓರ್ವ ಆರೋಪಿ ನೇರವಾಗಿ ಕೋರ್ಟಿಗೆ ಹಾಜರಾಗಿದ್ದಾನೆ.

Advertisement

ಚಿಕ್ಕಮಗಳೂರು ನಗರದ ಗೌರಿ ಕಾಲುವೆ ನಿವಾಸಿ ಆಜಂ ಪಾಷಾ. ನ್ಯಾಯಾಲಕ್ಕೆ ಶರಣಾದ ಆರೋಪಿ.

ಡಿಸೆಂಬರ್ 6-7-8 ರಂದು ನಡೆದಿದ್ದ ದತ್ತಜಯಂತಿ ಕಾರ್ಯಕ್ರಮದಲ್ಲಿ  ಮೊದಲ ದಿನ ಮಹಿಳೆಯರು ಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಚೆಲ್ಲಿದ್ದರು. ಪರಿಣಾಮ  ಪೊಲೀಸ್ ಸೇರಿದಂತೆ ನಾಲ್ಕೈದು ಗಾಡಿಗಳು ಪಂಚರ್ ಆಗಿ ರಸ್ತೆ ಮಧ್ಯೆ ನಿಂತಿದ್ದವು. ಈ ಪ್ರಕರಣದಲ್ಲಿ ಪೊಲೀಸರು ಮಹಮದ್ ಶಹಬಾಸ್, ವಾಹೀದ್ ಹುಸೇನ್ ಎಂಬ ಇಬ್ಬರನ್ನು ಬಂಧಿಸಿದ್ದರು. ಓರ್ವ ಆರೋಪಿ ತಲೆಮರೆಸಿಕೊಂಡಿದ್ದ.

ತಲೆಮರೆಸಿಕೊಂಡಿದ್ದ ಕೋರ್ಟಿಗೆ ಶರಣಾಗಿದ್ದಾನೆ. ಇದುವರೆಗೆ ಒಟ್ಟು ಮೂವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿಗಳು ಹಾರ್ಡ್‍ವೇರ್ ಶಾಪ್‍ನಲ್ಲಿ 4 ಕೆ.ಜಿ. ಮೊಳೆಗಳನ್ನು ಖರೀದಿಸಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next