Advertisement

ರಾಷ್ಟ್ರೀಯ ಯುವ ಸಂಸತ್ತು ಭಾಷಣ ಸ್ಪರ್ಧೆ : ಅಚಲ್‌ ಪಿ.ಮಯ್ಯ ರಾಷ್ಟ್ರಮಟ್ಟಕ್ಕೆ ಆಯ್ಕೆ

12:50 AM Jan 09, 2021 | Team Udayavani |

ಮಡಿಕೇರಿ: ಭಾರತ ಸರಕಾರ, ನೆಹರೂ ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ಯುವ ಸಂಸತ್ತು ಭಾಷಣ ಸ್ಪರ್ಧೆಯಲ್ಲಿ  ಕುಶಾಲನಗರದ ಅಚಲ್‌ ಪಿ. ಮಯ್ಯ  ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಿ.ರಜನಿ ಮತ್ತು ಎನ್‌. ಪ್ರದೀಪ್‌ ಅವರ ಪುತ್ರರಾಗಿರುವ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಅವರು ಜ. 12ರಂದು ಹೊಸದಿಲ್ಲಿಯಲ್ಲಿ ಪ್ರಧಾನಿ ಹಾಗೂ ಇತರ ಸಚಿವರ ಸಮ್ಮುಖದಲ್ಲಿ ನಡೆಯುವ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ನೆಹರೂ ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next