Advertisement

ಅಯೋಧ್ಯೆ ರಾಮ ಮಂದಿರ ಹೋರಾಟಗಾರ ಆಚಾರ್ಯ ಧರ್ಮೇಂದ್ರ ಮಹಾರಾಜ್ ನಿಧನ

07:00 PM Sep 19, 2022 | Team Udayavani |

ಜೈಪುರ: ಅಯೋಧ್ಯೆ ಶ್ರೀ ರಾಮ ಮಂದಿರ ಹೋರಾಟದಲ್ಲಿ ಸಕ್ರಿಯರಾಗಿದ್ದ ಹಿಂದೂ ಮುಖಂಡ, ಆಚಾರ್ಯ ಸ್ವಾಮಿ ಧರ್ಮೇಂದ್ರ ಮಹಾರಾಜ್ (79) ಸೋಮವಾರ ನಿಧನರಾಗಿದ್ದಾರೆ.

Advertisement

ಕಳೆದ ಕೆಲ ದಿನಗಳಿಂದ ಅನಾರೋಗ್ಯಪೀಡಿತರಾಗಿದ್ದ ಅವರನ್ನು ಚಿಕಿತ್ಸೆಗಾಗಿ ಇಲ್ಲಿನ ಸವಾಯ್ ಮಾನ್ ಸಿಂಗ್ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸೋಮವಾರ (ಸೆ.19) ಬೆಳಗ್ಗೆ ಕೊನೆಯುಸಿರೆಳೆದರು.

ಆಚಾರ್ಯ ಧರ್ಮೇಂದ್ರ ಅವರು ರಾಮ ಜನ್ಮಭೂಮಿ ಮಂದಿರ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಮಾತ್ರವಲ್ಲದೇ ತಮ್ಮ ಇಡೀ ಜೀವನವನ್ನು ಹಿಂದೂ, ಹಿಂದೂತ್ವ ಮತ್ತು ಹಿಂದೂಸ್ತಾನದ ಪ್ರಗತಿಗೆ ಅವರು ದೀರ್ಘಕಾಲ ಸಂಬಂಧ ಹೊಂದಿದ್ದರು.

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಆಚಾರ್ಯ ಧರ್ಮೇಂದ್ರ ಅವರ ಆರೋಗ್ಯ ವಿಚಾರಿಸಿದ್ದರು.

ಗಣ್ಯರ ಸಂತಾಪ
ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ , ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್,ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next