Advertisement

ಪ್ರೀತಿ ವಿಚಾರದಲ್ಲಿ ಗಲಾಟೆ; ಯುವತಿಯ ಮೇಲೆ ಆ್ಯಸಿಡ್ ಎರಚಿದ ಯುವಕ!

01:02 PM Apr 28, 2022 | Team Udayavani |

ಬೆಂಗಳೂರು: ಪ್ರೀತಿಯ ವಿಚಾರವಾಗಿ ಯುವಕನೋರ್ವ ಯುವತಿಗೆ ಆ್ಯಸಿಡ್ ಎರಚಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

Advertisement

ಯುವತಿಗೆ ಆ್ಯಸಿಡ್ ಎರಚಿದ ಯುವಕನನ್ನು ನಾಗೇಶ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಯುವತಿಯನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರೀತಿಯ ವಿಚಾರವಾಗಿ ನಾಗೇಶ್ ಯುವತಿಯ ಹಿಂದೆ ಬಿದ್ದಿದ್ದ. ಇದೇ ವಿಚಾರವಾಗಿ ಗಲಾಟೆಯಾಗಿತ್ತು. ಈ ಕೋಪದಲ್ಲಿ ಯುವಕ ಗುರುವಾರ ಬೆಳಗ್ಗೆ ಫೈನಾನ್ಸ್ ಕಂಪನಿಯೊಂದರ ಕಚೇರಿಯ ಬಳಿ ಯುವತಿಯ ಮೇಲೆ ಆ್ಯಸಿಡ್ ಎರಚಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಪೇದೆ ಪರೀಕ್ಷೆಯಲ್ಲೂ ಬ್ಲೂಟೂತ್‌ ಬಳಕೆ

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ನಾಗೇಶ್ ಎಂಬವನು ಯುವತಿ ಮೇಲೆ ಆ್ಯಸಿಡ್ ಹಾಕಿದ್ದಾನೆ. ಈ ಕಾಲದಲ್ಲಿ ಇದೊಂದು ಅಮಾನುಷ ಕೃತ್ಯ. ಪೊಲೀಸರು ಅವನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಯುವತಿಗೆ ಒಳ್ಳೆಯ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next