Advertisement

ಶೃಂಗೇರಿ ಬ್ಯೂಟಿಪಾರ್ಲರ್ ಯುವತಿ ಮೇಲೆ ಆ್ಯಸಿಡ್ ದಾಳಿ ಕೇಸ್: 4 ಆರೋಪಿಗಳು ದೋಷಿಯೆಂದು ತೀರ್ಪು

02:53 PM Jul 13, 2021 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣದ ನಾಲ್ವರು ಆರೋಪಿಗಳ ಮೇಲಿದ್ದ ಆರೋಪ ಸಾಬೀತಾಗಿದ್ದು ಜು.15ರಂದು ಶಿಕ್ಷೆಯ ಪ್ರಮಾಣ ತೀರ್ಪು ಹೊರಬೀಳಲಿದೆ.

Advertisement

2015ರ ಏ.18ರಂದು ಶೃಂಗೇರಿಯಲ್ಲಿ ಬ್ಯೂಟಿ ಪಾರ್ಲರ್ ಯುವತಿಯ ಮೇಲೆ ಗಣೇಶ್, ಕಬೀರ್, ಮಜೀದ್ ಹಾಗೂ ಪಾಲ್ ಪಿಂಟೋ ಎಂಬುವರು ಆ್ಯಸಿಡ್ ಎರಚಿದ್ದರು.

ಇದನ್ನೂ ಓದಿ:ವಂಚನೆ ಪ್ರಕರಣ : ದರ್ಶನ್ ಸ್ನೇಹಿತನ ವಿರುದ್ಧ ಉಮಾಪತಿ ಆರೋಪ

ಪ್ರಕರಣ ದಾಖಲಿಸಿಕೊಂಡಿದ್ದ ಶೃಂಗೇರಿ ಪೊಲೀಸ್ ಠಾಣಾಧಿಕಾರಿ ಸುಧೀರ್ ಹೆಗ್ಡೆ 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಾದ ಪ್ರತಿವಾದಗಳನ್ನು ಆಲಿಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನ ದೋಷಿಗಳೆಂದು ಆದೇಶಿಸಿದ್ದು ಶಿಕ್ಷೆಯ ಪ್ರಮಾಣವನ್ನು ಜು.15ರಂದು ಘೋಷಿಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next