Advertisement

ಜುಲೈ ತಿಂಗಳ ಎಲ್ಲಾ ವರ್ಗಾವಣೆ ಆದೇಶಕ್ಕೆ ತಡೆ ನೀಡಿದ ನಿಯೋಜಿತ ಸಿಎಂ ಬಿಎಸ್ ವೈ

08:54 AM Jul 27, 2019 | Nagendra Trasi |

ಬೆಂಗಳೂರು:ಬಿಎಸ್ ಯಡಿಯೂರಪ್ಪ 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ 2019ರ ಜುಲೈ ತಿಂಗಳಲ್ಲಿ ಜಾರಿಯಾಗದೆ ಇರುವ ವರ್ಗಾವಣೆ ಆದೇಶಗಳನ್ನು ಮುಂದಿನ ಆದೇಶದವರೆಗೆ ಜಾರಿ ಮಾಡದಂತೆ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

Advertisement

ಸಂಜೆ 6ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಏತನ್ಮಧ್ಯೆ ಅಧಿಕಾರ ಸ್ವೀಕಾರಕ್ಕೂ ಮುನ್ನ ಜುಲೈ ತಿಂಗಳಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಹೊಸ ಕಾಮಗಾರಿಗಳಿಗೆ ಸಂಬಂಧಿಸಿದ ಆದೇಶಗಳನ್ನು ತಕ್ಷಣವೇ ತಡೆ ಹಿಡಿಯುವಂತೆ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅವರಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

2019ರ ಜುಲೈ ತಿಂಗಳಿನಲ್ಲಿ ವರ್ಗಾವಣೆಗೆ ಸಂಬಂಧಿಸಿದ ಜಾರಿಯಾಗದೆ ಇರುವ ಆದೇಶಗಳನ್ನು ಮುಂದಿನ ಆದೇಶದವರೆಗೆ ಜಾರಿ ಮಾಡದಂತೆ ಹಾಗೂ ಈಗಾಗಲೇ ಹೊರಡಿಸಿರುವ ಆದರೆ ಚಾಲನೆಗೊಳ್ಳದಿರುವ ವರ್ಗಾವಣೆ ಸಂಬಂಧಿ ಪ್ರಸ್ತಾವಗಳ ಮೇಲಿನ ಆದೇಶಗಳನ್ನು ಮುಂದಿನ ಆದೇಶದವರೆಗೆ ಜಾರಿಗೊಳಿಸದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿಯೋಜಿತ ಸಿಎಂ ಯಡಿಯೂರಪ್ಪನವರು ನಿರ್ದೇಶನ ನೀಡಿರುವುದಾಗಿ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಲಿಖಿತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next