Advertisement

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

11:41 PM Apr 16, 2024 | Team Udayavani |

ದಾವಣಗೆರೆ: ಶಿವಮೊಗ್ಗದಲ್ಲಿ ಕೆ.ಎಸ್‌. ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರವಾಗಿ ಏನು ಕ್ರಮ ವಹಿಸಬೇಕೆಂದು ಪಕ್ಷವೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪಿಸಿದ್ದಾರೆ ಎಂಬುದರ ಬಗ್ಗೆ ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ರಾಜ್ಯದ ಎಲ್ಲ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇದ್ದು ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ನಿಶ್ಚಿತವಾಗಿ ಗುರಿ ತಲುಪುವ ವಿಶ್ವಾಸವಿದೆ.

ಬಿಜೆಪಿ-ಜೆಡಿಎಸ್‌ನವರು ಹಾಲು-ಜೇನಿನಂತೆ ಒಂದಾಗಿರುತ್ತೇವೆ. ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ಮಾಡಿಕೊಡದಂತೆ ಹೆಜ್ಜೆ ಇಡುತ್ತೇವೆ. ಈ ಹೊಂದಾಣಿಕೆ ಮುಂದಿನ ಎಲ್ಲ ಚುನಾವಣೆಗಳಲ್ಲಿಯೂ ಇರಬೇಕು ಎಂಬುದು ಪ್ರಧಾನಿ ಮೋದಿ ಆಶಯವಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next