Advertisement

ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

10:08 AM Jul 03, 2020 | Suhan S |

ಸಾಗರ: ತಾಲೂಕಿನಾದ್ಯಂತ ಸಾವಿರಾರು ಎಕರೆ ಸರ್ಕಾರಿ ಭೂಮಿ ಹಾಗೂ ಗೋಮಾಳ ಒತ್ತುವರಿ ಯಾಗುತ್ತಿರುವ ಬಗ್ಗೆದೂರುಗಳಿವೆ. ಒತ್ತುವರಿದಾರರಿಗೆ ಬೆಂಬಲ ನೀಡಿದವರ ವಿರುದ್ಧ ಕೆಲಸದಿಂದ ವಜಾಗೊಳಿಸುವಂತಹ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಹಾಯಕ ಆಯುಕ್ತ ಡಾ| ನಾಗರಾಜ್‌ ಎಲ್‌. ಎಚ್ಚರಿಕೆ ನೀಡಿದರು.

Advertisement

ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಒತ್ತುವರಿದಾರರಿಗೆ ನಾನು ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ. ಒತ್ತುವರಿಯನ್ನು ತೆರವು ಮಾಡಲು ಸಾಧ್ಯವಾಗದಿದ್ದರೆ ಒತ್ತುವರಿದಾರರನ್ನು ಪತ್ತೆಹಚ್ಚಿ ತಹಶೀಲ್ದಾರ್‌ ಅಥವಾ ನನ್ನ ಗಮನಕ್ಕೆ ತರಬೇಕು. ಒತ್ತುವರಿ ತೆರವು ಸಂದರ್ಭದಲ್ಲಿ ಪಕ್ಷಭೇದ ಬೇಡ. ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಮಾಡೋಣ. ಸರ್ಕಾರಿ ಜಮೀನು ಉಳಿಸಿಕೊಳ್ಳುವಲ್ಲಿ ನಮ್ಮೆಲ್ಲರ ಪಾತ್ರ ಪ್ರಮುಖವಾಗಿದೆ ಎಂದರು.

ಸರ್ಕಾರಿ  ನೌಕರರ ಸಂಘದ ತಾಲೂಕು ಅಧ್ಯಕ್ಷ ಜಿ.ಪರಮೇಶ್ವರಪ್ಪ ಮಾತನಾಡಿ, ಕಂದಾಯ ಇಲಾಖೆ ನೌಕರರಿಗೆ ಅಧಿಕಾರಿಗಳಿಂದ ಪ್ರೋತ್ಸಾಹ ಸಿಗುತ್ತಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ ಎಂದರು. ತಹಶೀಲ್ದಾರ್‌ ಚಂದ್ರಶೇಖರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next