Advertisement

ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ: ವೇದಮೂರ್ತಿ

07:45 AM Jun 21, 2020 | Suhan S |

ರಾಯಚೂರು: ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಇದುವರೆಗೆ 16 ಪ್ರಕರಣ ದಾಖಲು ಮಾಡಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ. ವೇದಮೂರ್ತಿ ತಿಳಿಸಿದ್ದಾರೆ.

Advertisement

ಜೂ.17 ರಂದು ಒಂದು ಪ್ರಕರಣ, ಜೂ.18 ರಂದು 6, ಜೂ.19 ರಂದು 9 ಪ್ರಕರಣ ಸೇರಿದಂತೆ ಇಲ್ಲಿಯವರೆಗೆ 16 ಕ್ವಾರೆಂಟೈನ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, 17 ಜನರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕ್ವಾರೆಂಟೈನ್‌ ಮಾಡಲಾದವರು ಹೊರ ಬರದೇ ಕ್ವಾರೆಂಟೈನ್‌ನಲ್ಲಿಯೇ ಇರಬೇಕು. ಅವಧಿ  ಮುಗಿಯುವವರೆಗೂ ಸರ್ಕಾರಿ ಆದೇಶ ಪಾಲನೆ ಮಾಡಲು ಸೂಚನೆ ನೀಡಲಾಗಿದೆ. ಇನ್ನೂ ಮುಂದೆ ಯಾರಾದರೂ ಕ್ವಾರಂಟೈನ್‌ನಿಂದ ತಪ್ಪಿಸಿಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next