Advertisement

Govt Land ಕಾನೂನು ಬಾಹಿರವಾಗಿ ಅನುಮತಿ ನೀಡಿದರೆ ತಹಶೀಲ್ದಾರ್‌ ವಿರುದ್ಧ ಕ್ರಮ

08:35 PM Dec 11, 2023 | Team Udayavani |

ಸುವರ್ಣ ವಿಧಾನಸೌಧ: ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಬದಲಾವಣೆ ಮಾಡಿದರೆ ತಹಶೀಲ್ದಾರ್‌ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Advertisement

ಕಾಂಗ್ರೆಸ್‌ ಶಾಸಕ ಗಣಿಗ ರವಿಕುಮಾರ್‌ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಭೂಮಿ ಒತ್ತುವರಿ ತಡೆಯಲು ಬೀಟ್‌ ಆ್ಯಪ್‌ ಜಾರಿಗೆ ತರಲಾಗಿದೆ. ಸರ್ಕಾರಿ ಭೂಮಿಗಳನ್ನು ಗುರುತಿಸಿ ಜಿಯೋ ಫೆನ್ಸಿಂಗ್‌ ಮಾಡಿ ಒತ್ತುವರಿಯಿಂದ ರಕ್ಷಣೆ ಮಾಡಲಾಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳ ಪರಿಶೀಲಿಸಿ ಒತ್ತುವರಿಯಾದರೆ ವಿಡಿಯೋ ಅಪ್‌ಲೋಡ್‌ ಮಾಡಲು ಸೂಚಿಸಲಾಗಿದೆ. ಒತ್ತುವರಿ ತೆರವುಗೊಳಿಸಿದ ಭೂಮಿಗೆ ಕಂದಕ, ತಂತಿಬೇಲಿ ಹಾಕಿ ನಾಮಫ‌ಲಕ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ವಿಶೇಷ ಜಾರಿದಳ ಕೋಶ ರಚಿಸಲಾಗಿದೆ ಎಂದು ವಿವರಿಸಿದರು.

ಭೂಮಿ ತಂತ್ರಾಂಶದಲ್ಲಿ ಯಾವುದೇ ಆರ್‌ಟಿಸಿಯನ್ನು ಸರ್ಕಾರದ ಹೆಸರಿನಿಂದ ಖಾಸಗಿ ವ್ಯಕ್ತಿಯ ಹೆಸರಿಗೆ ಬದಲಾವಣೆ ಮಾಡುವ ಮೊದಲು ತಹಶೀಲ್ದಾರ್‌ ಅನುಮೋದನೆ ಕಡ್ಡಾಯ. ಕಾನೂನು ಬಾಹಿರವಾಗಿ ಅನುಮತಿ ನೀಡಿದರೆ ತಹಶೀಲ್ದಾರ್‌ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸದನಕ್ಕೆ ಬಂದ ರಮೇಶ್‌ ಜಾರಕಿಹೊಳಿ
ಬೆಳಗಾವಿ ಅಧಿವೇಶನ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ಶಾಸಕ ರಮೇಶ್‌ ಜಾರಕಿಹೊಳಿ ಸೋಮವಾರ ವಿಧಾನಸಭೆಗೆ ಆಗಮಿಸಿದರು. ಆದರೆ ಅವರು ಕಲಾಪದಲ್ಲಿ ಪಾಲ್ಗೊಳ್ಳುವುದಕ್ಕೆ ಮುನ್ನವೇ ಸ್ಪೀಕರ್‌ ಹತ್ತು ನಿಮಿಷಗಳ ಕಾಲ ಕಲಾಪ ಮುಂದೂಡಿದ್ದರು. ಬಿಜೆಪಿ ಪ್ರತಿಭಟನೆ ನಡೆಸಿದ್ದರಿಂದ ಸಹಸದಸ್ಯರ ಜತೆ ಕಾಲ ಕಳೆಯಬೇಕಾಯಿತು.

Advertisement

Udayavani is now on Telegram. Click here to join our channel and stay updated with the latest news.

Next