Advertisement

ಬಲಿಜ ಸಮುದಾಯಕ್ಕೆ ಉದ್ಯೋಗದಲ್ಲಿ 2ಎ ಮೀಸಲಾತಿಗೆ ಕ್ರಮ: ಸಿಎಂ ಭರವಸೆ

09:35 AM Nov 09, 2019 | Team Udayavani |

ಚಿಕ್ಕಬಳ್ಳಾಪುರ: ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ ಬಲಿಜ ಸಮುದಾಯಕ್ಕೆ ಶಿಕ್ಷಣದಲ್ಲಿ ಕಲ್ಪಿಸಿರುವ 2ಎ ಮೀಸಲಾತಿಯನ್ನು ಉದ್ಯೋಗದಲ್ಲಿ ಕಲ್ಪಿಸುವ ಬಗ್ಗೆ ಪರಾಮರ್ಶೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

Advertisement

ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿಶೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ 710 ಕೋಟಿ ವೆಚ್ಚದ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳು ಹೂ, ಹಣ್ಣು ತರಕಾರಿ ಬೆಳೆದು ರಾಜ್ಯಕ್ಕೆ ಪೂರೈಸುತ್ತಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಮೆಡಿಕಲ್ ಕಾಲೇಜ್ ಮಂಜೂರು ಮಾಡಿದ್ದು ಎರಡು ವರ್ಷದಲ್ಲಿ ಕಾಲೇಜು ಕಟ್ಟಡ ಪೂರ್ಣಗೊಳಿಸಲಾಗುವುದೆಂದರು.

Advertisement

Udayavani is now on Telegram. Click here to join our channel and stay updated with the latest news.

Next