Advertisement

ಒಂದೂವರೆ ತಿಂಗಳಲ್ಲಿ ಅಧಿಸೂಚನೆಗೆ ಕ್ರಮ

10:45 PM Oct 19, 2019 | Team Udayavani |

ಹುಬ್ಬಳ್ಳಿ: ಮಹದಾಯಿ ಸಮಸ್ಯೆ ಬಗೆಹರಿಸಲು ಗಂಭೀರ ಪ್ರಯತ್ನಗಳು ನಡೆದಿವೆ. ಇನ್ನು ಒಂದೂವರೆ ತಿಂಗಳಲ್ಲಿ ಮಹದಾಯಿ ಕುರಿತ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯವಾಗಿ ಗೆಜೆಟ್‌ ನೋಟಿಫಿಕೇಶನ್‌ ಆಗಬೇಕೆಂಬ ಅಭಿಪ್ರಾಯವಿದೆ. ಆದರೆ, ಕರ್ನಾಟಕ ಹಾಗೂ ಗೋವಾ ಸರಕಾರಗಳು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿವೆ ಹಾಗೂ ನ್ಯಾಯಾಧಿಕರಣದಲ್ಲಿ ಸ್ಪಷ್ಟೀಕರಣ ಕೇಳಿವೆ.

Advertisement

ಗೋವಾ ಸರಕಾರಕ್ಕೆ ಗೆಜೆಟ್‌ ನೋಟಿಫಿಕೇಶನ್‌ಗೆ ಸಹಕಾರ ನೀಡುವಂತೆ ಕೋರಿದ್ದೇನೆ. ಆದರೆ, ಅದು ನಂತರ ಆಗಲ್ಲವೆಂದು ಹೇಳುತ್ತಿದೆ. ಇದರ ಹೊರತಾಗಿ ಸಮಸ್ಯೆ ಇತ್ಯರ್ಥಗೊಳಿಸಲು ಬಾಹ್ಯವಾಗಿ ಗಂಭೀರ ಪ್ರಯತ್ನಗಳು ನಡೆದಿವೆ. ಇನ್ನು ಒಂದು-ಒಂದೂವರೆ ತಿಂಗಳಲ್ಲಿ ಇದು ಇತ್ಯರ್ಥವಾಗುವ ವಿಶ್ವಾಸವಿದೆ. ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಬಿಜೆಪಿ ಪ್ರಯತ್ನಿಸುತ್ತಿಲ್ಲವೆಂಬ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದರು.

ಮಹದಾಯಿ ವಿಷಯವಾಗಿ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸುವ ಸಲುವಾಗಿ ಸುಪ್ರೀಂಕೋರ್ಟ್‌ ಹಾಗೂ ನ್ಯಾಯಾಧಿಕರಣದಲ್ಲಿನ ಮೇಲ್ಮನವಿ ಹಿಂಪಡೆದುಕೊಂಡು ಸಮಸ್ಯೆ ಬಗೆಹರಿಸಬಹುದೇನೋ ಎಂಬುದರ ಬಗ್ಗೆ ರಾಜ್ಯ ಸರಕಾರ ಕಾನೂನು ತಜ್ಞರೊಂದಿಗೆ ಸಲಹೆ ಪಡೆದು, ಕೂಲಂಕುಷವಾಗಿ ಪರಿಶೀಲಿಸಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಿದೆ. ಈ ವಿಷಯವಾಗಿ ಯಡಿಯೂರಪ್ಪ ಸಹ ಸಕಾರಾತ್ಮಕವಾಗಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next