Advertisement

ಚಾಲಕರಿಗೆ ಪರಿಹಾರ ವಿತರಣೆಗೆ ಕ್ರಮ: ಡಿಸಿಎಂ ಸವದಿ

05:17 PM May 26, 2021 | Team Udayavani |

ಬೆಂಗಳೂರು : ಕೋವಿಡ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಈ ಲಾಕ್ ಡೌನ್ ನಿಂದಾಗಿ ತೊಂದರೆಯಾಗುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ತಲಾ ಮೂರು ಸಾವಿರ ರೂಪಾಯಿಯಷ್ಟು ಆರ್ಥಿಕ ಸಹಾಯ ನೀಡಲು ನಮ್ಮ  ಸರ್ಕಾರವು ನಿರ್ಧರಿಸಿದಂತೆ ಸಾರಿಗೆ ಇಲಾಖೆಯಿಂದ ಈ ಪರಿಹಾರ ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು  ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

Advertisement

ಅರ್ಹ ಅಭ್ಯರ್ಥಿಗಳು  ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ನಾಳೆ  (ಮೇ 27) ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಪ್ರಾರಂಭವಾಗುವುದು. ಹೀಗೆ ಅರ್ಜಿ ಸಲ್ಲಿಸಿದ ಸೂಕ್ತ ಫಲಾನುಭವಿಗಳ ಅಕೌಂಟ್ ಗಳಿಗೆ ನೇರವಾಗಿ ಈ ಪರಿಹಾರ ಧನವನ್ನು ವರ್ಗಾಯಿಸಲಾಗುವುದು.    ಬಡ ಚಾಲಕರ ನೆರವಿಗೆ ಮುಂದಾಗಿರುವ ನಮ್ಮ ಸರ್ಕಾರದ ಸೌಲಭ್ಯವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು  ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಕೃಷಿಯಲ್ಲಿ ಖುಷಿ ಕಂಡ ನಟಿ ಆಶಿಕಾ ರಂಗನಾಥ್

ಕಳೆದ ಬಾರಿಯೂ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಸಾರಿಗೆ ಇಲಾಖೆಯಿಂದ ಲಕ್ಷಾಂತರ ಮಂದಿ ಅರ್ಹ ಚಾಲಕರಿಗೆ ಪರಿಹಾರಧನವನ್ನು ವಿತರಿಸಲಾಗಿತ್ತು ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ ಎಂದರು

Advertisement
Advertisement

Udayavani is now on Telegram. Click here to join our channel and stay updated with the latest news.

Next