Advertisement
ಪ್ರಯಾಣಿಕರಿಗೆ ಮಾಸ್ಕ್ಬಸ್ಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ತಪ್ಪದೇ ಮಾಸ್ಕ್ ಧರಿಸುವಂತೆ ಬಸ್ನ ನಿರ್ವಾಹಕರು ಎಚ್ಚರ ವಹಿಸಬೇಕು. ಸಾರ್ವಜನಿಕರು ಓಡಾಡುವ ಬಸ್ಗಳನ್ನು ಪ್ರತೀ ದಿನ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು ಎಂದರು. ಭಕ್ತರು, ಪ್ರವಾಸಿಗರಿಗೆ ಮಾಸ್ಕ್ ಜಿಲ್ಲೆಯ ಪ್ರತಿಯೊಂದು ದೇವಸ್ಥಾನದಲ್ಲಿ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಬರುವ ಪ್ರವಾಸಿಗರು ಮುಖಗವಸು ಧರಿಸಬೇಕು. ಇಲ್ಲದಿದ್ದರೆ ಅವರ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಸೂಚಿಸಿದರು.
ಸರಕಾರವು ನೀಡಿರುವ ಮಾರ್ಗಸೂಚಿ ನಿರ್ಲಕ್ಷಿಸಿ ಜನರು ಓಡಾಡುತ್ತಿದ್ದರೆ ಅಂಥವರ ಮೇಲೆ ದಂಡವನ್ನು ವಿಧಿಸಬೇಕೆಂದು ಸೂಚಿಸಿದರು. ಮೀನು ಮಾರುಕಟ್ಟೆಯಲ್ಲಿ ಎಚ್ಚರ
ಮಲ್ಪೆ ಹಾಗೂ ಗಂಗೊಳ್ಳಿ ಬಂದರಿನ ಮೀನು ಮಾರುಕಟ್ಟೆ, ಎ.ಪಿ.ಎಂ.ಸಿ. ಮಾರುಕಟ್ಟೆಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸುವ ಕೆಲಸವಾಗಬೇಕಿದೆ ಎಂದರು.
Related Articles
Advertisement
ಜಾಗೃತಿ ಮೂಡಿಸಿಸರಕಾರಿ ನೌಕರರು ಕೋವಿಡ್ ಪ್ರತಿಜ್ಞೆ ಸ್ವೀಕರಿಸಿ ಮಾರ್ಗಸೂಚಿ ತಪ್ಪದೇ ಪಾಲಿಸುವುದರೊಂದಿಗೆ ಜನ ಸಾಮಾನ್ಯರಿಗೆ ಮಾದರಿಯಾಗಿ
ಮಾರ್ಗಸೂಚಿ ಪಾಲಿಸುವ ರೀತಿಯಲ್ಲಿ ಜನಜಾಗೃತಿ ಆಂದೋಲನ ನಡೆಸ ಬೇಕು. ಎಲ್ಲ ಇಲಾಖೆಯ ಕಾರ್ಯಕ್ರಮ ನಡೆಯುವಾಗ ಕೋವಿಡ್ ಜಾಗೃತಿ ಮೂಡಿಸುವ ಕೆಲಸವಾಗಬೇಕು, ಅಲ್ಲದೆ ದೈನಂದಿನ ಕೆಲಸ-ಕಾರ್ಯಗಳ ಪತ್ರದಲ್ಲಿಯೂ ಕೊರೊನಾ ಜಾಗೃತಿ ಮೂಡಿಸುವ ಬಗ್ಗೆ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.