Advertisement

ಮಹಿಳೆ, ಮಕ್ಕಳ ಸುರಕ್ಷತೆಗೆ ಕ್ರಮ

11:40 AM May 05, 2018 | |

ಬೆಂಗಳೂರು: ಕ್ಷೇತ್ರದಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರ ಸುರಕ್ಷತೆಗಾಗಿ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದೇನೆ ಎಂದು ವಿಜಯನಗರ ಕಾಂಗ್ರೆಸ್‌ ಅಭ್ಯರ್ಥಿ ಎಂ.ಕೃಷ್ಣಪ್ಪ ತಿಳಿಸಿದ್ದಾರೆ.

Advertisement

ಶುಕ್ರವಾರ ವಿಜಯನಗರ ಕ್ಷೇತ್ರದ ದೀಪಾಂಜಲಿ ನಗರ ಸೇರಿದಂತೆ ವಿವಿಧೆಡೆ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದ ಅವರು, ಹಿರಿಯ ನಾಗರಿಕರಿಗೆ ಸರ್ಕಾರಿ ಸವಲತ್ತು ದೊರೆಯುವಂತಾಗಲು ಆಧಾರ್‌ ನೋಂದಣಿ ಕಾರ್ಯಾಗಾರ, ನಿವೃತ್ತ ನೌಕರರಿಗೆ ಪಿಂಚಣಿ ಸಿಗುವಂತಾಗಲು ಪಿಂಚಣಿ ಶಿಬಿರ,

ಹಿರಿಯ ನಾಗರಿಕರ ಆರೋಗ್ಯ ಚಿಕಿತ್ಸೆಗಾಗಿ ವೈದ್ಯಕೀಯ ಶಿಬಿರ, ನೇತ್ರ ತಪಾಸಣಾ ಶಿಬಿರ ಕೈಗೊಂಡು ಉಚಿತ ಕನ್ನಡಕ ಸಹ ವಿತರಿಸಲಾಗಿದೆ. ಕ್ಷೇತ್ರದಲ್ಲಿರುವ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ಕಂಪ್ಯೂಟರ್‌ ಹಾಗೂ ಗ್ರಂಥಾಲಯ ಪರಿಕರ ಒದಗಿಸಿ ಮಕ್ಕಳಿಗೆ ಅನುಕೂಲ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದರು.

ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರ ಭದ್ರತೆಗಾಗಿ ಎಲ್ಲೆಡೆ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ. ಸುಗಮ ಸಂಚಾರಕ್ಕಾಗಿ ರಸ್ತೆ ಅಭಿವೃದ್ಧಿ, ಸಿಗ್ನಲ್‌ ಫ್ರೀ ಜಂಕ್ಷನ್‌ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು. ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದು ಮತ್ತೂಮ್ಮ ಆಶೀರ್ವಾದ ಮಾಡುವಂತೆ ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next