Advertisement

ಗೃಹಲಕ್ಷ್ಮೀ ನೋಂದಣಿಗೆ ಹಣ ಪಡೆದರೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

07:45 AM Jul 25, 2023 | Team Udayavani |

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಗೆ ಜನರಿಂದ ಹಣ ಪಡೆದರೆ ಅಥವಾ ಯೋಜನೆ ಅನುಷ್ಠಾನದ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಅಂತಹವರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಜನರಿಂದ ಹಣ ಪಡೆಯುತ್ತಿದ್ದ ಮೂರು ಕೇಂದ್ರಗಳ ಲಾಗಿನ್‌ ಐಡಿ ಹಿಂಪಡೆಯಲಾಗಿದೆ. ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸುಮ್ಮನೆ ಕುಳಿತಿಲ್ಲ ಎಂದರು.

ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಗೆ ಫಲಾನುಭವಿಗಳಿಂದ ಹಣ ಪಡೆಯುವುದು ಕಂಡುಬಂದರೆ, ಅಂತಹವರ ಲಾಗಿನ್‌ ಐಡಿ ಮತ್ತು ಪಾಸ್‌ವರ್ಡ್‌ ಹಿಂದಕ್ಕೆ ಪಡೆಯಬೇಕು. ನಿಯಮ ಗಾಳಿಗೆ ತೂರಿದವರ ವಿರುದ್ಧ ಪ್ರಕರಣವನ್ನೂ ದಾಖಲಿಸಲು ಸೂಚಿಸಲಾಗಿದೆ.

ಎಲ್ಲಿಯಾದರೂ ಹಣ ಪಡೆಯುತ್ತಿರುವುದು ಕಂಡುಬಂದರೆ ತಹಶೀಲ್ದಾರರು, ಪಿಡಿಒಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಹಾಗೂ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ಕೊಡಬೇಕು ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next