Advertisement

ಕ್ವಾರಂಟೈನ್ಲ್ಲಿದ್ದ ವ್ಯಕ್ತಿಗಳು ನಿಯಮ ಮೀರಿದರೆ ಕ್ರಮ: ಎಡಿಸಿ ಎಚ್ಚರಿಕೆ

04:53 PM Jun 20, 2020 | Suhan S |

ಹಾವೇರಿ: ಜಿಲ್ಲೆಯಲ್ಲಿ ಕ್ವಾರಂಟೈನ್‌ ಗೆ ಒಳಗಾಗಬೇಕಾದ ಕೆಲ ವ್ಯಕ್ತಿಗಳು ನಿಯಮ ಮೀರಿ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಹೋಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.  ನಿಯಮ ಮೀರಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ ತಿಳಿಸಿದ್ದಾರೆ.

Advertisement

ಕೋವಿಡ್‌-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಕ್ವಾರಂಟೈನ್‌ ಮಾಡಲಾಗುತ್ತಿದೆ. ಜೂ. 18ರಂದು ಕ್ವಾರಂಟೈನ್‌ ನಿಯಮ ಉಲ್ಲಂಘನೆ ಮಾಡಿದ ಕುರಿತು ಜಿಲ್ಲಾ ಕೋವಿಡ್‌ ವಾರ್‌ ರೂಂನಿಂದ ಮಾಹಿತಿ ಬಂದಿದೆ. ಇಂಥ ವ್ಯಕ್ತಿಗಳ ಮೇಲೆ ಕೋವಿಡ್‌-19 ಆಕ್ಟ್ 2020, ಎಪಿಡಮಿಟಿಕ್‌ ಡಿಸಿಸ್‌ ಆಕ್ಟ್ 1897ರ ಅಡಿ ನಿಯಮಾನುಸಾರ ಕ್ರಮಕೈಗೊಳ್ಳಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ದಾಖಲಿಸಲು ಕೋರಲಾಗಿದೆ.

ಹೋಂ-ಕ್ವಾರಂಟೈನ್‌ ಹಾಗೂ ಇನ್ಸಿಟ್ಯೂಷನ್‌ ಕ್ವಾರಂಟೈನ್‌ಗೆ ಒಳಪಡಿಸಲಾದ ವ್ಯಕ್ತಿಗಳು ಕಡ್ಡಾಯವಾಗಿ ಕ್ವಾರಂಟೈನ್‌ ನಿಯಮಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next