Advertisement

ರಾಹುಲ್‌ ಗಾಂಧಿಗೆ ಕ್ರಿಯಾ ಯೋಜನೆ ಸಲ್ಲಿಕೆ: ಡಿ.ಕೆ.ಶಿವಕುಮಾರ್‌ 

11:46 PM Jun 29, 2022 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಎದುರಿಸುವ ಕಾರ್ಯತಂತ್ರಗಳ ಕುರಿತು ರಾಹುಲ್‌ ಗಾಂಧಿ ಅವರಿಗೆ ಕ್ರಿಯಾ ಯೋಜನೆ ಸಲ್ಲಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ದಿಲ್ಲಿಯಲ್ಲಿ ಮಾತನಾಡಿದ ಅವರು, ನಾನು ಹಾಗೂ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಜತೆ ಸುದೀರ್ಘ‌ ಚರ್ಚೆ ನಡೆಸಿದ್ದೇವೆ. ನಮ್ಮ ಮುಂದಿನ ಕಾರ್ಯತಂತ್ರಗಳ ರೂಪುರೇಷೆಗಳ ಕ್ರಿಯಾ ಯೋಜನೆ ನೀಡಿದ್ದೇವೆ.

ಪ್ರತಿಯೊಬ್ಬ ನಾಯಕನಿಗೂ ಒಂದೊಂದು ರೀತಿಯ ಬಲ ಇದ್ದು, ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಮುಂದಿನ ಬಾರಿ ನಾವು ಸ್ವಂತ ಬಲದ ಮೇಲೆ ಸರಕಾರ ರಚಿಸುವುದು ಖಚಿತ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next