Advertisement
ಜಕ್ಕೂರು ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾದರಿ ಪಾರಂಪರಿಕ ಕಲಾ ಗ್ರಾಮ, ರಂಗೋಲಿ ಗಾರ್ಡನ್ಸ್ ಲೋಕಾರ್ಪಣೆ ಮಾಡಿ ಮಾತನಾಡಿದರು.
ಮನುಷ್ಯ ಸಂಸ್ಕೃತಿ, ಸಂಸ್ಕಾರ ಇಲ್ಲದೆ ಬದುಕಲಾರ. ಸಮಾಜದಲ್ಲಿ ಸಾಮೂಹಿಕವಾಗಿ ಬದುಕುತ್ತಾನೆ. ಅದಕ್ಕೆ ಭಾಷೆ, ಅರ್ಥ, ಭಾವನೆ,ನೀತಿ, ಗಾಯನ ಇರಬೇಕು. ಇದೆಲ್ಲವೂ ಒಂದಕ್ಕೊಂದು ಹೊಂದಿಕೊಂಡು ಇಲ್ಲಿ ಬಿಂಬಿತವಾಗಿದೆ ಎಂದರು. ನಮ್ಮ ಸಂಸ್ಕೃತಿಯನ್ನು ಜನ ಪ್ರೀತಿಸುತ್ತಾರೆ. ರಂಗೋಲಿ ಗಾರ್ಡನ್ ಮೂಲಕ ಹಳ್ಳಿ ವಾತಾವರಣ ಬೆಂಗಳೂರಿನಲ್ಲಿಯೇ ಸಿಗಲಿದೆ ಎಂದರು. ಶಾಸಕ ಕೃಷ್ಣಬೈರೇಗೌಡ ಮಾತನಾಡಿ, ಉತ್ತರ ಕರ್ನಾಟಕದ ಸಂಸ್ಕೃತಿಯ ಕಲೆಯನ್ನು ಬಿಂಬಿಸಲು ನೆರವಾಗಿದ್ದು ಶ್ಲಾಘನೀಯ. ಬೆಂಗಳೂರಿಗೆ ಗ್ರಾಮೀಣ ಕಲೆಯ ವಿಹಾರ ದೊರೆಯುತ್ತದೆ. ಇದರ ಅವಶ್ಯಕತೆ ಇತ್ತು. ಶಿಶುನಾಳ ಶರೀಫರ ಕರ್ಮ ಭೂಮಿಯಲ್ಲಿ ಇದೇ ಮಾದರಿಯ ಯೋಜನೆಗೆ ಚಾಲನೆ ನೀಡಲಾಗಿದೆ. ಇಂಥ ಕಲೆ, ಪರಂಪರೆ, ಇತಿಹಾಸವನ್ನು ಮಕ್ಕಳಿಗೆ ಬಿಂಬಿಸುವ ಉತ್ತಮ ಕೆಲಸವಾಗಿದೆ ಎಂದರು.
Related Articles
Advertisement
ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಸಿಎಸ್ ಅತೀಕ್, ರಂಗೋಲಿ ಗಾರ್ಡನ್ ರೂವಾರಿ ರಾಜು ಕೊನ್ನೂರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.