Advertisement

ಪ್ರಸೂತಿ ತಜ್ಞರ ಹುದ್ದೆ ಭರ್ತಿಗೆ ಕ್ರಮ ವಹಿಸಿ: ಡಿಸಿ

12:55 PM Jul 19, 2020 | Suhan S |

ಬೀದರ: ಜಿಲ್ಲೆಯಲ್ಲಿ ಸ್ತ್ರೀರೋಗ, ಪ್ರಸೂತಿ ತಜ್ಞರ ಹುದ್ದೆಗಳು ಖಾಲಿ ಇದ್ದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಅವುಗಳನ್ನು ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸಂಘ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಎಲ್ಲ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೂರವಾಣಿ ಕರೆ ಮೇರೆಗೂ ಪ್ರಸೂತಿ ತಜ್ಞರು ಬಂದು ಹೋದಲ್ಲಿ ಸಹಕಾರಿಯಾಗಲಿದೆ. ಜಿಲ್ಲೆಯಲ್ಲಿ ಲ್ಯಾಬ್‌ ಟೆಕ್ನಿಷಿಯನ್‌ ಅಗತ್ಯಕ್ಕೆ ತಕ್ಕಂತೆ ಲಭ್ಯವಿದ್ದು, ಇದಕ್ಕನುಗುಣವಾಗಿ ಗಂಟಲು ದ್ರವದ ಪರೀಕ್ಷೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸೂತಿ ಮಾಡಿಸಿಕೊಂಡು ವಿಫಲವಾದಲ್ಲಿ ಅಂಥವರಿಗೆ ಸರ್ಕಾರದಿಂದ ಸಿಗುವ 60 ಸಾವಿರ ರೂ. ಸಹಾಯಧನ ವಿತರಿಸಲು ಕ್ರಮ ಕೈಗೊಳ್ಳಲು ಕುಟುಂಬ ಕಲ್ಯಾಣಾಧಿಕಾರಿ ಇಂದುಮತಿ ಪಾಟೀಲ ಅವರಿಗೆ ಸೂಚಿಸಿದರು.

ರಕ್ತದಾನಕ್ಕೆ ಹಿಂದೇಟು ಬೇಡ :  ರಕ್ತದಾನಕ್ಕೂ ಮತ್ತು ಕೊರೊನಾ ವೈರಸ್‌ಗೂ ಯಾವುದೇ ಸಂಬಂಧವಿಲ್ಲ. ಕೋವಿಡ್‌-19 ಭೀತಿಯಿಂದ ರಕ್ತದಾನ ಮಾಡಲು ಜನರು ಹಿಂದೇಟು ಹಾಕದೇ ರಕ್ತದಾನ ಮಾಡಿ ಮತ್ತೂಬ್ಬರ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಬೇಕು. ಕೋವಿಡ್‌-19 ಹಿನ್ನೆಲೆಯಲ್ಲಿ ತುರ್ತು ಕಾರ್ಯ ನಿರ್ವಹಣೆಗಾಗಿ ಜಿಲ್ಲೆಯ ಆಯುಷ್‌ ವೈದ್ಯರು 24 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಆಯುಷ್‌ ಅಧಿಕಾರಿ ಕ್ರಮ ವಹಿಸಬೇಕು.  -ಆರ್‌. ರಾಮಚಂದ್ರನ್‌, ಜಿಲ್ಲಾಧಿಕಾರಿ ಬೀದರ.

Advertisement

Udayavani is now on Telegram. Click here to join our channel and stay updated with the latest news.

Next