Advertisement

Madhu Bangarappa ಅನುದಾನಿತ ಶಾಲೆಗಳ ಖಾಲಿ ಹುದ್ದೆ ಭರ್ತಿಗೆ ಕ್ರಮ

11:09 PM Jul 28, 2024 | Shreeram Nayak |

ಶಿವಮೊಗ್ಗ: ಅನುದಾನಿತ ಶಾಲೆಗಳ ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಜತೆ ಚರ್ಚಿಸಲಾಗಿದೆ. 2015ರಿಂದ ಈವರೆಗೆ ಭರ್ತಿಗೆ ಅವಕಾಶ ನೀಡಲಾಗಿದೆ. ಮುಂದಿನ 5 ವರ್ಷದ ಖಾಲಿ ಹುದ್ದೆಗಳ ನೇಮಕಾತಿ ಸದ್ಯದಲ್ಲೇ ನಡೆಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೈಹಿಕ ಶಿಕ್ಷಣ ಶಿಕ್ಷಕರು ಪ್ರತಿಭಟನೆ ಸಂಬಂಧ ಯಾವುದೇ ಮಾಹಿತಿ ಇಲ್ಲ. ಚುನಾವಣೆಯಲ್ಲಿ ಭರವಸೆ ನೀಡಿದಂತೆ ಸರ್ಕಾರ 7ನೇ ವೇತನ ಆಯೋಗದ ವರದಿ ಜಾರಿಗೊಳಿಸಿದೆ. ಸರ್ಕಾರಿ ನೌಕರರು ಇದರಿಂದ ಸಂತಸಗೊಂಡಿದ್ದಾರೆ.

ಶಿಕ್ಷಕರ ಸಮಸ್ಯೆಗಳನ್ನು ಹಂತ-ಹಂತವಾಗಿ ಪರಿಹರಿಸಲಾಗುವುದು. ಹಳೆಯ ಸಮಸ್ಯೆಗಳನ್ನೆಲ್ಲ ನನ್ನ ಬಳಿ ಹೇಳಿಕೊಳ್ಳುತ್ತಿದ್ದಾರೆ. ಆದ್ಯತೆ ಮೇಲೆ ನಿವಾರಣೋಪಾಯ ಕಂಡುಕೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next