Advertisement

Startup ರಾಜಧಾನಿಯಾಗಿಸಲು ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

10:07 PM Jun 13, 2023 | Team Udayavani |

ಬೆಂಗಳೂರು: ಕರ್ನಾಟಕವನ್ನು ಮತ್ತೊಮ್ಮೆ ದೇಶದ ಸ್ಟಾರ್ಟ್‌ ಅಪ್‌ ಗಳ ರಾಜಧಾನಿಯನ್ನಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Advertisement

ರಾಜ್ಯದ ನವೋದ್ಯಮಿಗಳಿಗೆ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲು ಕ್ರಮ ವಹಿಸುವ ನಿಟ್ಟಿನಲ್ಲಿ ಐಟಿ ಬಿಟಿ ಇಲಾಖೆಯ ಅಧಿಕಾರಿಗಳು ಹಾಗೂ ಇಲಾಖೆಯ ತಾಂತ್ರಿಕ ಪಾಲುದಾರರೊಂದಿಗೆ ಸಚಿವರು ಮಂಗಳವಾರ ಚರ್ಚೆ ನಡೆಸಿದರು.

ಜತೆಗೆ ಕರ್ನಾಟಕದೊಂದಿಗೆ ವ್ಯವಹಾರ, ಮತ್ತು ತಾಂತ್ರಿಕ ಜ್ಞಾನ ಹಂಚಿಕೆ ಹಾಗೂ ಉದ್ಯೋಗ ಸೃಷ್ಟಿಗೆ ತಯಾರಾಗಿರುವ ಎಲ್ಲ ಕಂಪೆನಿಗಳೊಂದಿಗೆ ಮಾತುಕತೆ ನಡೆಸಲು ನಾವು ಸಿದ್ಧ ಎಂಬ ಸಂದೇಶವನ್ನು ರವಾನಿಸಲು ಸರಕಾರ ಕ್ರಮ ಕೈಗೊಳ್ಳಲಿದೆ. ಮಾಹಿತಿ ತಂತ್ರಜ್ಞಾನ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್‌ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next