Advertisement

ವಿಪತ್ತು ನಿರ್ವಹಣೆ ಕಾಯ್ದೆಯಡಿ ಕ್ರಮ: ಅಶೋಕ್‌

12:50 AM Apr 16, 2020 | Sriram |

ಬೆಂಗಳೂರು: ಲಾಕ್‌ಡೌನ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮೂಲಕ ಜನ ನಮಗೆ ಸಹ ಕಾರ ನೀಡಬೇಕು ಇಲ್ಲವಾ ದರೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಠಿನ ಕ್ರಮ ಜರಗಿಸ ಬೇಕಾಗುತ್ತದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

Advertisement

ಲಾಕ್‌ಡೌನ್‌ ಹಾಗೂ ಸೀಲ್‌ಡೌನ್‌ ನಿಯಮಗಳನ್ನು ಕೆಲವರು ಲೆಕ್ಕಕ್ಕೆ ತೆಗೆದುಕೊಳ್ಳದೆ ಅನಾವಶ್ಯಕವಾಗಿ ಓಡಾಡುತ್ತಿದ್ದಾರೆ. ಕಾನೂನು ಉಲ್ಲಂ ಘನೆ ಮಾಡುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಠಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಎಲ್ಲ ಸಮು ದಾಯದ ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ನಡೆಸಲಾಗಿದೆ. ಎಲ್ಲರೂ ಕೋವಿಡ್ 19 ಸೋಂಕು ತಡೆಯುವ ನಿಟ್ಟಿನಲ್ಲಿ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಸೋಂಕು ಹರಡುವಿಕೆ ಹಾಗೂ ಸಾವಿನ ಪ್ರಮಾಣವೂ ಸದ್ಯ ನಿಯಂತ್ರಣದಲ್ಲಿದೆ. ಶೇ. 1.6ರಷ್ಟು ಸಾವಿನ ಪ್ರಮಾಣವಿದ್ದು, ಇದನ್ನು ಮತ್ತಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಸರಕಾರ ಕ್ರಮ ತೆಗೆದುಕೊಳ್ಳುತ್ತಿದೆ

Advertisement

Udayavani is now on Telegram. Click here to join our channel and stay updated with the latest news.

Next