Advertisement

ಇನ್ನೂ 10 ವರ್ಷ ರಾಜಕೀಯದಲ್ಲಿ ಸಕ್ರಿಯ: ಬಿ.ಎಸ್‌. ಯಡಿಯೂರಪ್ಪ

11:15 PM Jan 08, 2023 | Team Udayavani |

ಹೊಸನಗರ: ವಿವಿಧ ಪಾದಯಾತ್ರೆಗಳ ಮೂಲಕ ಪಕ್ಷ ಕಟ್ಟಿದ್ದೇನೆ. ನನ್ನ ಹೋರಾಟದ ದಿನಗಳಲ್ಲಿ ನಮ್ಮ ಶಾಸಕರು ಇರಲಿಲ್ಲ. ಆದರೆ ಅಂದಿನ ಹೋರಾಟ ಫಲ ಇಂದು ಅಧಿಕಾರ ನಡೆಸುವಂತಾಗಿದೆ. ದೇವರು ಆಯುಷ್ಯ ಕೊಟ್ಟರೆ ಇನ್ನೂ ಎರಡು ಅವಧಿಗೆ ರಾಜಕೀಯದಲ್ಲಿ ಸಕ್ರಿಯವಾಗಿರುವೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

Advertisement

ಹೊಸನಗರ ತಾಲೂಕಿನ ಬ್ರಹ್ಮೇಶ್ವರದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹೋರಾಟದ ದಿನದಲ್ಲಿ ಶಾಸಕರಾಗಿದ್ದವರು ನಾನು ಮತ್ತು ದಕ್ಷಿಣ ಕನ್ನಡದ ವಸಂತ ಬಂಗೇರ ಮಾತ್ರ. ಆದರೆ ಇಂದು ಹಳ್ಳಿ ಹಳ್ಳಿಯಲ್ಲೂ ಬಿಜೆಪಿ ಕಾರ್ಯಕರ್ತರ ಪಡೆ ಸದೃಢವಾಗಿದೆ. ಪ್ರಧಾನಿ ಮೋದಿ ದೇಶ ಕಂಡ ಮಹಾನ್‌ ಪುರುಷ. ದಣಿವರಿಯದ ನಾಯಕರಾಗಿದ್ದು ಅವರ ನೇತೃತ್ವದಲ್ಲಿ ನಾವೆಲ್ಲ ಕೆಲಸ ಮಾಡಬೇಕಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next