Advertisement

ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಾರ್ಯಕರ್ತೆಗೆ ಬೆಂಕಿ

11:03 AM Oct 08, 2017 | Team Udayavani |

ಬೆಂಗಳೂರು: ಬೆಂಗಳೂರು ಯುವ ಕಾಂಗ್ರೆಸ್‌ ಘಟಕದಿಂದ ಕೇಂದ್ರ ಸರ್ಕಾರ ಅನಿಲ ಬೆಲೆ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಕಾರ್ಯಕರ್ತರು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಪ್ರಕರಣ ನಡೆದಿದೆ.

Advertisement

ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ರಘುವೀರ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಗ್ಯಾಸ್‌ ಬೆಲೆ ಹೆಚ್ಚಳವಾಗಿರುವುದನ್ನು ಖಂಡಿಸಲು ರಸ್ತೆಯಲ್ಲಿಯೇ ಅಡುಗೆ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಅಡುಗೆ ಒಲೆಗೆ ಬೆಂಕಿ ಹಚ್ಚಲು ಪೆಟ್ರೋಲ್‌ ಸುರಿದಿದ್ದರಿಂದ ಸಮಾಂತ ಎನ್ನುವ ಮಹಿಳೆಗೆ ಬೆಂಕಿ ತಗುಲಿದ್ದರಿಂದ ಮಹಿಳೆ ಗಾಯಗೊಂಡಿದ್ದಾರೆ.

ಅದನ್ನು ಚಿತ್ರೀಕರಿಸಲು ತೆರಳಿದ್ದ ವಿದ್ಯುನ್ಮಾನ ಮಾಧ್ಯಮದ ಕ್ಯಾಮರಾಮೆನ್‌ಗಳ ಮೇಲೆ ಹಲ್ಲೆ ಮಾಡಿ ಕ್ಯಾಮರಾಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೇ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಯುವ ಕಾಂಗ್ರೆಸ್‌ ಕಾರ್ಯಕರ್ತರ ದುಂಡಾವರ್ತಿ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಟಿವಿ ಚಾನೆಲ್‌ ವರದಿಗಾರರು ಮತ್ತು ಕ್ಯಾಮೆರಾ ಮನ್‌ಗಳು ದೂರು ನೀಡಿದ್ದಾರೆ. ಸೋಮವಾರದ ಒಳಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next