Advertisement

ವೇದಿಕೆಯಲ್ಲೇ ಬಿಎಸ್ ವೈ ವಿರುದ್ಧ ನಟ ಚೇತನ್ ಆಕ್ರೋಶ, ಅಭಿಮಾನಿ ಕಿಡಿ

01:25 PM Aug 30, 2017 | Team Udayavani |

ಬೆಂಗಳೂರು:ಲಿಂಗಾಯತ ಧರ್ಮವನ್ನು ಒಡೆದಿದ್ದೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಸುತ್ತೂರು ಮಠದವರು ಎಂದು ನಟ ಚೇತನ್ ವೇದಿಕೆಯಲ್ಲಿಯೇ ಮಾತನಾಡುತ್ತ ನೇರವಾಗಿ ಆರೋಪಿಸಿದ ಪ್ರಸಂಗ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಬಿಎಸ್ ವೈ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಗದ್ದಲ ನಡೆಸಿದರು.

Advertisement

ಬೆಂಗಳೂರಿನ ಬಸವ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕರೆದಿದ್ದ ಸಭೆಯಲ್ಲಿ ನಟ ಚೇತನ್ ಅವರು ಮಾತನಾಡುತ್ತ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಎಸ್ ಯಡಿಯೂರಪ್ಪನವರು ಭ್ರಷ್ಟಾಚಾರದಿಂದ ಸಿಎಂ ಕುರ್ಚಿಯಿಂದ ಕೆಳಗಿಳಿದಿದ್ದರು. ಇವತ್ತು ಆಧುನಿಕ ಬಸವಣ್ಣ ಎಂದು ಹೇಳುತ್ತಿದ್ದಾರೆ. ರಾಜಕೀಯಕ್ಕಾಗಿ ದಲಿತರ ಮನೆಗೆ ಹೋಗಿ ತಿಂಡಿ ತಿನ್ನುವ ಯಡಿಯೂರಪ್ಪ, ಆಧುನಿಕ ಕೊಂಡಿ ಮನುಷ್ಯ ಎಂದು ಹೇಳಿದರು.

ನಟ ಚೇತನ್ ಅವರು ಯಡಿಯೂರಪ್ಪ ವಿರುದ್ಧ ಮಾತನಾಡುತ್ತಿದ್ದಂತೆಯೇ ಸಭೆಯಲ್ಲಿ ಗದ್ದಲ, ವಿರೋಧ ವ್ಯಕ್ತವಾಯಿತು. ಬಿಎಸ್ ವೈ ಅಭಿಮಾನಿ ಶಿವಕುಮಾರ್ ಎಂಬವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next