Advertisement

ಚುನಾವಣಾ ಪ್ರಚಾರದಲ್ಲಿ ತಾರಾ ಮೆರಗು

06:15 AM May 06, 2018 | Team Udayavani |

ಬೆಂಗಳೂರು: ದಿನ ಕಳೆದಂತೆ ರಾಜ್ಯ ಚುನಾವಣಾ ಕಣ ರಂಗೇರುತ್ತಿದ್ದು, ಸಿನಿಮಾ ತಾರೆಯರು ಕೂಡ ಶನಿವಾರ ರಾಜ್ಯದ
ವಿವಿಧೆಡೆ ಪ್ರಚಾರ ನಡೆಸಿದರು.ಸಿಎಂ ಸಿದ್ದರಾಮಯ್ಯ ಪರ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ರೋಡ್‌ ಶೋ ನಡೆಸಿದರು.

Advertisement

ಕ್ಷೇತ್ರದ ನಾಗನಹಳ್ಳಿಯಲ್ಲಿ ಶನಿವಾರ ಬೆಳಗ್ಗೆ ರೋಡ್‌ ಶೋ ನಡೆಸಲು ಬಂದ ದರ್ಶನ್‌ ವಿರುದ್ಧ ಜೆಡಿಎಸ್‌ ಕಾರ್ಯಕರ್ತರು ಘೋಷಣೆ ಕೂಗಿದರು. ಜಿ.ಟಿ.ದೇವೇಗೌಡ ಪರ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಕಾರ್ಯಕರ್ತರು ದರ್ಶನ್‌ ಹಾಗೂ ಸಿದ್ದರಾಮಯ್ಯ ಅವರಿಗೆ ಜೈಕಾರ ಕೂಗಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇದರ ಮಧ್ಯೆಯೇ ತೆರೆದ ವಾಹನ ಏರಿದ ದರ್ಶನ್‌, ಜನರತ್ತ ಕೈ ಬೀಸಿ ಹೊರಟ ನಂತರ, ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು ತಮ್ಮ ಪಕ್ಷದ ಬಾವುಟ ಹಿಡಿದು ಧಿಕ್ಕಾರ,ಜೈಕಾರ ಕೂಗ ತೊಡಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು. ಬಳಿಕ, ದರ್ಶನ್‌ ಬೆಲವತ್ತ ಗ್ರಾಮದ ಒಳಗೆ ಬಾರದೇ ಹಿಂತಿರುಗಿದ್ದರಿಂದ ಬೇಸರಗೊಂಡ ದರ್ಶನ್‌ ಅಭಿಮಾನಿಗಳು, ಸನ್ಮಾನಕ್ಕಾಗಿ ತಂದಿದ್ದ ಶಾಲು,ಮೈಸೂರು ಪೇಟಾವನ್ನು ರಸ್ತೆಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿಯೂ ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ಉಂಟಾಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಜೆಡಿಎಸ್‌ ಕಾರ್ಯಕರ್ತರ ಪ್ರತಿರೋಧದ ನಡುವೆಯೂ ದರ್ಶನ್‌, ಸಿದ್ದರಾಮಯ್ಯ ಪರ ಚಾಮುಂಡೇಶ್ವರಿ ಕ್ಷೇತ್ರದ 33 ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಸುದೀಪ್‌ ಶೋ: ಇದೇ ವೇಳೆ, ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜುಗೌಡ ಪರ ಚಿತ್ರನಟ ಸುದೀಪ
ಪ್ರಚಾರ ನಡೆಸಿದರು. ಈ ವೇಳೆ,ಮಾತನಾಡಿ, ಸಿದ್ದರಾಮಯ್ಯ ಅವರ ಪರವಾಗಿ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರಕ್ಕೆ ಹೋಗುವ ನಿರ್ಧಾರ ಮಾಡಿಲ್ಲ.

ಯಾವುದೇ ಕಾರಣಕ್ಕೂ ಬಾದಾಮಿ ಕ್ಷೇತ್ರದ ಪ್ರಚಾರಕ್ಕೆ ಹೋಗುವುದಿಲ್ಲ. ಒಂದು ವೇಳೆ,ಶ್ರೀರಾಮುಲು ಆಹ್ವಾನಿಸಿದರೆ ಖಂಡಿತ ಹೋಗುತ್ತೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next