Advertisement

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

11:24 PM Jun 30, 2024 | Team Udayavani |

ಬೆಂಗಳೂರು: ನಟ ದರ್ಶನ್‌(Darshan) ಪ್ರಕರಣ ಕುರಿತಂತೆ ಮೊದಲ ಬಾರಿಗೆ ನಟ ಶಿವರಾಜ್‌ ಕುಮಾರ್‌(Shiva Rajkumar) ಪ್ರತಿಕ್ರಿಯಿಸಿದ್ದಾರೆ. “ಮನುಷ್ಯನ ಹಣೆಬರಹವನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಏನೂ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ.

Advertisement

ರವಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಂತಹ ಘಟನೆಗಳು ಆದಾಗ ತುಂಬಾ ನೋವಾಗುತ್ತದೆ. ಯಾಕಪ್ಪಾ ಹೀಗಾಯಿತು ಎಂದು ಬೇಸರ ಆಯಿತು. ರೇಣುಕಾಸ್ವಾಮಿ ಕುಟುಂಬಕ್ಕೆ, ದರ್ಶನ್‌ ಅವರ ಕುಟುಂಬಕ್ಕೆ ನೋವಾಗುತ್ತದೆ.

ದರ್ಶನ್‌ ಮಗನ ಬಗ್ಗೆ ಬೇಸರ ಆಗುತ್ತಿದೆ. ನಾವು ಎಲ್ಲವನ್ನೂ ಎದುರಿಸಬೇಕು. ಈಗಾಗಲೇ ತನಿಖೆ ಆರಂಭವಾಗಿದೆ. ನ್ಯಾಯ ಏನಿದೆಯೋ ಅದೇ ಆಗುತ್ತದೆ’ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next