Advertisement

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

12:21 AM Sep 13, 2024 | Team Udayavani |

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಗುರುವಾರ 24ನೇ ಎಸಿಎಂಎಂ ಕೋರ್ಟ್‌ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯಿತು.

Advertisement

ನ್ಯಾಯಾಲಯವು 1 ದಿನದ ಅವಧಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ನಟ ದರ್ಶನ್‌, ಪವಿತ್ರಾ ಗೌಡ ಸೇರಿ ವಿವಿಧ ಜೈಲಿನಿಂದ ಒಟ್ಟು 17 ಆರೋಪಿಗಳನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ಗುರುವಾರ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ದರ್ಶನ್‌ ಆ್ಯಂಡ್‌ ಗ್ಯಾಂಗ್‌ಗೆ ಶುಕ್ರವಾರದವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

ದರ್ಶನ್‌ ದುರ್ವರ್ತನೆ
ಬಳ್ಳಾರಿ: ಜೈಲಿನ ಸಂದರ್ಶಕರ ಕೊಠಡಿಯಲ್ಲಿದ್ದ ವಕೀಲರನ್ನು ಭೇಟಿಯಾಗಲು ಪೊಲೀಸರು ಕರೆತರುತ್ತಿದ್ದ ವೇಳೆ ಆರೋಪಿ ನಟ ದರ್ಶನ್‌, ವೀಡಿಯೋ ಮಾಡುತ್ತಿದ್ದ ಮಾಧ್ಯಮಗಳತ್ತ ಮಧ್ಯದ ಬೆರಳು ತೋರಿಸುವ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ.

ಈ ಮೂಲಕ ಮಾಧ್ಯಮಗಳ ಮೇಲೆ ಮತ್ತೊಮ್ಮೆ ತಮ್ಮ ದರ್ಪ ಮೆರೆದಿದ್ದಾರೆ. ಬೆಳಗ್ಗೆ ಪತ್ನಿ ವಿಜಯಲಕ್ಷ್ಮಿ ಬಂದಾಗ ಸಾಫ್ಟ್‌ ಆಗಿದ್ದ ದರ್ಶನ್‌, ಸಂಜೆ ಮತ್ತೂಮ್ಮೆ ವಕೀಲರನ್ನು ಭೇಟಿಯಾಗಲು ಬಂದಾಗ ಮಾಧ್ಯಮಗಳಿಗೆ ಮಧ್ಯದ ಬೆರಳು ತೋರಿ ದುರ್ವರ್ತನೆ ತೋರಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next