Advertisement

Ballari: ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್…

10:11 AM Aug 29, 2024 | Team Udayavani |

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮತ್ತು ಆತನ ಸಂಗಡಿಗರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ಈ ಬೆನ್ನಲ್ಲೇ ಗುರುವಾರ ಬೆಳಿಗ್ಗೆ ದರ್ಶನ್‌ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಜೈಲಿಗೆ ಸ್ಥಳಾಂತರಿಸುತ್ತಿದ್ದಾರೆ.

Advertisement

ಪೊಲೀಸ್ ಬಿಗಿ ಬಂದೋಬಸ್ತ್ ಮೂಲಕ ಬಳ್ಳಾರಿ ಜೈಲಿಗೆ ಕರೆತರಲಾಗಿದ್ದು ನಟ ದರ್ಶನ್ ಬಳ್ಳಾರಿ ಜೈಲಿಗೆ ಕರೆ ತರುವ ಹಿನ್ನಲೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರ ಮತ್ತು ಡಾ.ಶೋಭಾರಾಣಿ ಬಳ್ಳಾರಿ ಜೈಲಿಗೆ ಬಂದಿದ್ದಾರೆ, ನಟ ದರ್ಶನ ಜೈಲಿಗೆ ಬಂದಾಕ್ಷಣ ಅರೋಗ್ಯ ತಪಾಸಣೆ ನಡೆಸಿ ಬಳಿಕ ಹೈ ಸೆಕ್ಯೂರಿಟಿ ಸೆಲ್ ನಲ್ಲಿ ದರ್ಶನ್ ಬಂಧಿಸಿಡಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ.

ಪೊಲೀಸ್ ಸರ್ಪಗಾವಲಿನಲ್ಲಿ ಜೈಲ್ ಒಳಗೆ ಹೋದ ದರ್ಶನ ಇದ್ದ ವಾಹನ. ಜೈಲಿನ ಒಳ ಭಾಗದಲ್ಲಿ ಬಲಗಡೆ ಸೆಕ್ಯೂರಿಟಿ ಕೊಠಡಿಯಲ್ಲಿ ಸಹಿ ಮಾಡಿ ಒಳಗೆ ಹೋದ ದರ್ಶನ್.

ದರ್ಶನ್ ತಂದಿರೋ ಎರಡು ಬ್ಯಾಗ್ ಪರಿಶೀಲನೆ ಮಾಡಿ ಒಳಗೆ ಕಳುಹಿಸಿದ ಪೊಲೀಸರು. ಬ್ಲಾಕ್ ಟೀಶರ್ಟ್.. ಚಸ್ಮಾ ಹಾಕಿದ್ದ ದರ್ಶನ್. ತಪಾಸಣೆ ವೇಳೆ ಹೆಚ್ಚುವರಿ ಪೊಲೀಸರ ನಿಯೋಜನೆ. ಎಸ್ಪಿ ಶೋಭಾರಾಣಿ, ಜೈಲು ಅಧೀಕ್ಷಕಿ ಲತಾ ಮುಂದಾಳತ್ವದಲ್ಲಿ ಜೈಲಿಗೆ ಶಿಫ್ಟ್.

ಜೈಲಿನ ಸುತ್ತ ಅಭಿಮಾನಿಗಳು ಸೇರುವ ಹಿನ್ನೆಲೆಯಲ್ಲಿ ಜೈಲಿನ ಹೊರಗೆ ಬಿಗಿ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next