Advertisement

Vijayalakshmi Darshan‌: ಪತಿ ದರ್ಶನ್‌ಗಾಗಿ ಟೆಂಪಲ್‌ ರನ್‌ ಮುಂದುವರೆಸಿದ ಪತ್ನಿ

12:35 PM Aug 05, 2024 | Team Udayavani |

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy case) ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌(Darshan) ಗಾಗಿ ಪತ್ನಿ ವಿಜಯಲಕ್ಷ್ಮೀ (Vijayalakshmi) ಟೆಂಪಲ್‌ ರನ್‌ ಮುಂದುವರೆಸಿದ್ದಾರೆ.

Advertisement

ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಪತಿ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಜಾಮೀನು ವಿಚಾರದ ಬಗ್ಗೆಯೂ ಅವರೊಂದಿಗೆ ಮಾತನಾಡಿದ್ದಾರೆ.

ಪತಿ ಆದಷ್ಟು ಬೇಗ ಜೈಲಿನಿಂದ ಹೊರಬೇಕೆಂದು ಪತ್ನಿ ವಿಜಯಲಕ್ಷ್ಮೀ ದೇವರ ಬಳಿ ಪ್ರಾರ್ಥಿಸುತ್ತಿದ್ದಾರೆ.

ಭಾನುವಾರ(ಆ.4ರಂದು) ವಿಜಯಲಕ್ಷ್ಮೀ ತನ್ನ ಸ್ನೇಹಿತೆಯ ಜೊತೆಗೆ ನಗರದ ಬನಶಂಕರಿ ದೇವಸ್ಥಾನಕ್ಕೆ ಸ್ನೇಹಿತೆ ಜೊತೆ ಭೇಟಿ ನೀಡಿದ್ದಾರೆ. ಈ ವೇಳೆ  ವಿಜಯಲಕ್ಷ್ಮಿ ಸಂಕಲ್ಪ ಪೂಜೆ ಮಾಡಿಸಿ, ಪತಿಗಾಗಿ ಪ್ರಾರ್ಥಿಸಿದ್ದಾರೆ.

ಅವರ ದೇವಸ್ಥಾನದ ಭೇಟಿಯ ಫೋಟೋಗಳು ದರ್ಶನ್‌ ಅಭಿಮಾನಿಗಳ ವಲಯದದಲ್ಲಿ ವೈರಲ್‌ ಆಗಿದೆ.

Advertisement

ಇತ್ತೀಚೆಗೆ ವಿಜಯಲಕ್ಷ್ಮೀ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಗೆ ನವ ಚಂಡಿಕಾ ಯಾಗ ಮಾಡಿಸಿದ್ದರು. ಸಹೋದರ ದಿನಕರ್ ತೂಗುದೀಪ್ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದರು.

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆ.14 ರವರೆಗೆ ವಿಸ್ತರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next