Advertisement

ಜನರನ್ನು ನಿರ್ದಯವಾಗಿ ಹೊಡೆಯಬೇಡಿ : ಪೊಲೀಸರಿಗೆ ನಟ ಜಗ್ಗೇಶ್ ಮನವಿ

01:36 PM May 09, 2021 | Team Udayavani |

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಮ್ಮ ಅಭಿಮಾನಿಗಳಿಗೆ ಹಾಗೂ ರಾಜ್ಯದ ಜನತೆಗೆ ಕೋವಿಡ್ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಕೇವಲ ಜಾಗೃತಿ ಮಾತ್ರವಲ್ಲ ಅಗತ್ಯ ಇರುವವರಿಗೆ ತಮ್ಮ ಕೈಲಾದ ಸಹಾಯವನ್ನೂ ಮಾಡುತ್ತಿದ್ದಾರೆ.

Advertisement

ಸಮಾಜದ ಕುರಿತು ತಮಗಿರುವ ಕಾಳಜಿ ವ್ಯಕ್ತಪಡಿಸುತ್ತಿರುವ ಜಗ್ಗೇಶ್ ಅವರು ಇದೀಗ ರಾಜ್ಯದ ಪೊಲೀಸರಿಗೆ ಒಂದು ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಹಾಗು ತಮ್ಮ ಆದೇಶ ಪಾಲಿಸದವರಿಗೆ ದಂಡ ಹಾಕಿ ವಾಹನ ಜಪ್ತಿಮಾಡಿ ತೊಂದರೆ ಇಲ್ಲಾ. ಆದರೆ, ನಿರ್ದಯವಾಗಿ ಲಾಟಿಯಲ್ಲಿ ಹೊಡೆಯಬೇಡಿ. ಯುವಕರಾದರೆ ಪರವಾಗಿಲ್ಲಾ ತಡೆದುಕೊಳ್ಳುತ್ತಾರೆ. ಆದರೆ, ವಯಸ್ಸಾದವರು ಪಾಪ ಯಾವ ಖಾಯಿಲೆ ಇರುತ್ತದೆ ಎಂದು ನಿಮಗೇನು ತಿಳಿದಿರುತ್ತದೆ. ಕೆಲ ಅಧಿಕಾರಿಗಳು ಒಂದು ಏಟುಕೊಟ್ಟು ಭಯಪಡಿಸುವ ಬದಲು ಪ್ರಾಣಹೋಗುವಂತೆ ಭಾರಿಸುತ್ತಾರೆ ಎಂದಿದ್ದಾರೆ.

ಇನ್ನು ಜನರಿಗೂ ಕಿವಿ ಮಾತು ಹೇಳಿರುವ ಜಗ್ಗೇಶ್, ಈ ಹಾಳಾದ ಕೋವಿಡ್ ಮನುಕುಲದ ಅನ್ನ ದುಡಿಮೆ ನೆಮ್ಮದಿಯ ಕಸಿದಿದೆ. ಮನುಷ್ಯರಾಗಿ ನಾವು ಮನುಷ್ಯತ್ವ ಪಾಲಿಸುವ. ಈ ರೋಗ ಮನುಕುಲದ ಸಾವಿಗಾಗಿಯೇ ಬಂದಿದೆ. ಧರೆಯೇ ಹತ್ತಿ ಉರಿಯುತ್ತಿದೆ ದಯಮಾಡಿ ಸ್ವಲ್ಪ ದಿನ ವೈದ್ಯಲೋಕದ ಮಾತಿನಂತೆ ಕೆಲತಿಂಗಳು ಎಚ್ಚರವಾಗಿ ಇದ್ದುಬಿಡಿ ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next