Advertisement

ನಟಿ ಮಾಲಾಶ್ರೀಗೆ ಸಾಂತ್ವಾನ ಹೇಳಿದ ನಟ ಜಗ್ಗೇಶ್

02:09 PM Apr 30, 2021 | Team Udayavani |

ಬೆಂಗಳೂರು: ಪತಿ ಕಳೆದುಕೊಂಡು ದುಃಖದಲ್ಲಿರುವ ನಟಿ ಮಾಲಾಶ್ರೀ ಅವರಿಗೆ ನಟ ನವರಸ ನಾಯಕ ಜಗ್ಗೇಶ್ ಅವರು ಸಾಂತ್ವಾನ ಹೇಳಿದ್ದಾರೆ.

Advertisement

ಇಂದು ಈ ಬಗ್ಗೆ ಟ್ವಿಟ್ ಮಾಡಿರುವ ಜಗ್ಗೇಶ್, ನಿಮ್ಮ ಸಂಕಷ್ಟದಲ್ಲಿ ಭಾಗಿ ಆಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆಬಾಗಿ ಕ್ಷಮೆ ಕೋರುವೆ. ನಿಮ್ಮ ಜೊತೆ ನಾವು ಉಧ್ಯಮದ ಎಲ್ಲಾ ಸ್ನೇಹಿತರು ಸದಾ ಇರುತ್ತೇವೆ. ಮುಂದಿನ ಸಾಂಸಾರಿಕ ಜೀವನ ನಿಭಾಯಿಸುವ ಶಕ್ತಿ ರಾಯರು ನಿಮಗೆ ನೀಡಲಿ ಎಂದು ಹಾರೈಸಿದ್ದಾರೆ.

ರಾಮು ಮತ್ತೊಮ್ಮೆ ಹುಟ್ಟಿಬರಲಿ ಎಂದು ರಾಯರಲ್ಲಿ ಪ್ರಾರ್ಥನೆ ಮಾಡುವೆ ಎಂದಿರುವ ಜಗ್ಗೇಶ್, ದಯಮಾಡಿ ನೀವು ಧೈರ್ಯದಿಂದ ಈ ಸಂಕಷ್ಟ ಎದುರಿಸಿ ಮಕ್ಕಳನ್ನ ರಾಮು ಎತ್ತರಕ್ಕೆ ಬೆಳಸಿ. ನಿಮ್ಮ ಜೊತೆ ನಾವು ಉಧ್ಯಮದ ಎಲ್ಲಾ ಸ್ನೇಹಿತರು ಸದಾ ಇರುತ್ತೇವೆ. ಮುಂದಿನ ಸಾಂಸಾರಿಕ ಜೀವನ ನಿಭಾಯಿಸುವ ಶಕ್ತಿ ರಾಯರು ನಿಮಗೆ ನೀಡಲಿ. ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿಮಾತ್ರ ಉಳಿದಿದೆ. ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆಮಾಡಿ ಅನೇಕ ಚಿತ್ರರಂಗದ ಕಾರ್ಮಿಕರಿಗೆ ಅನ್ನನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿಕೋರುತ್ತಿದ್ದೇನೆ ಎಂದಿದ್ದಾರೆ.

ಇನ್ನು ಇತ್ತೀಚಿಗಷ್ಟೆ ಕೋವಿಡ್ ಮಹಾಮಾರಿಗೆ ರಾಮು ಅವರು ನಿಧನರಾದರು. ಇವರು ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೆ ಖ್ಯಾತನಾಮರಾಗಿದ್ದರು. ಸ್ಯಾಂಡಲ್‍ವುಡ್‍ನಲ್ಲಿ ಸಾಕಷ್ಟು ಬಿಗ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next