Advertisement

ಮಳೆ ಆರ್ಭಟ: ಸ್ನೇಹಿತನ ಮನೆಯಲ್ಲಿ ನಿಲ್ಲಿಸಿದ್ದ ನಟ ಜಗ್ಗೇಶ್‌ ದುಬಾರಿ ಕಾರು ಮುಳುಗಡೆ

09:44 AM May 22, 2023 | Team Udayavani |

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ವರುಣನ ಆರ್ಭಟ ಮುಂದುವರೆದಿದೆ. ಮಳೆಯಿಂದಾಗಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್‌ ಅವರ ದುಬಾರಿ ಕಾರು ಮುಳುಗಡೆ ಆಗಿದೆ.

Advertisement

ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದಲೇ ಮಳೆಯ ಆರ್ಭಟ ಜೋರಾಗಿತ್ತು. ಕೆ.ಆರ್.ಸರ್ಕಲ್‌, ಮಹಾಲಕ್ಷ್ಮೀ ಲೇಔಟ್‌ ಸೇರಿದಂತೆ ಹಲವು ಪ್ರದೇಶದಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.

ಇತ್ತ ನಟ, ರಾಜ್ಯಸಭಾ ಸದಸ್ಯರೂ ಆಗಿರುವ ಜಗ್ಗೇಶ್‌ ಅವರ ಐಷಾರಾಮಿ ಕಾರೊಂದು ಮಳೆಯ ನೀರಿನಲ್ಲಿ ಮುಳುಗಿ ಹೋಗಿದೆ. ಈ ಬಗ್ಗೆ ಸ್ವತಃ ಜಗ್ಗೇಶ್‌ ಅವರೇ ಟ್ವೀಟ್‌ ಮಾಡಿದ್ದಾರೆ.

“ನನ್ನ ಮನೆಯ ರಿಪೇರಿ ಕಾರ್ಯ ಪ್ರಯುಕ್ತ ನನ್ನ ರಸ್ತೆಯ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್ ನಲ್ಲಿ ನಿಲ್ಲಿಸಿದ್ದ ನನ್ನ ಬಿಎಂಡಬ್ಲ್ಯೂ5 ಕಾರು ಅಕಾಲಿಕ ಮಳೆ ನೀರಿನಲ್ಲಿ ಮುಳುಗಡೆ ಆಯಿತು. 5 ಹೆಚ್‌ ಪಿ ಮೋಟರ್ ಬಳಸಿ ನೀರು ಹೊರಹಾಕಿಸಲಾಯಿತು. ಇಂಥ ಅಲ್ಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ” ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್‌ ನಲ್ಲಿ ಈ ಬಗ್ಗೆ ಫೋಟೋ ಹಾಗೂ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Advertisement

ಮಳೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿದ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next