Advertisement

Accident: ನಟ ನಾಗಭೂಷಣ್‌ ಮದ್ಯ ಸೇವಿಸಿರಲಿಲ್ಲ

10:45 PM Nov 12, 2023 | Team Udayavani |

ಬೆಂಗಳೂರು: ಎರಡು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತ ಪ್ರಕರಣ ಸಂಬಂಧ ನಟ ನಾಗಭೂಷಣ್‌ ವಿರುದ್ಧ ಕುಮಾರಸ್ವಾಮಿ ಸಂಚಾರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ನಾಗಭೂಷಣ್‌ ಮದ್ಯ ಸೇವಿಸಿರಲಿಲ್ಲ. ಆದರೆ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ.

Advertisement

ಪ್ರಕರಣ ಸಂಬಂಧ ಸಂಚಾರ ಪೊಲೀಸರು ನಾಗಭೂಷಣ್‌ ವಿರುದ್ಧ 20ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆ, ಘಟನೆಯಲ್ಲಿ ಗಾಯಗೊಂಡ ಕೃಷ್ಣ ಅವರ ಹೇಳಿಕೆ, ಘಟನಾ ಸ್ಥಳದ ಸಿಸಿ ಕೆಮರಾಗಳ ದೃಶ್ಯಗಳು, ಪ್ರತ್ಯಕ್ಷದರ್ಶಿಗಳ ಹೇಳಿಕೆ ಒಳಗೊಂಡಂತೆ 70ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಸೆ.30ರಂದು ಕೋಣನಕುಂಟೆ ಸಮೀಪ ಅಪಘಾತ ಸಂಭವಿಸಿದ್ದು, ಮಹಿಳೆಯೋರ್ವರು ಮೃತಪಟ್ಟು, ಅವರ ಪತಿ ಗಾಯಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next