Advertisement

ಕೋವಿಡ್-19:ಆಂಧ್ರ, ತೆಲಂಗಾಣಕ್ಕೆ ತಲಾ 50 ಲಕ್ಷ, ಪ್ರಧಾನಿ ಪರಿಹಾರ ನಿಧಿಗೆ 1 ಕೋಟಿ: ನಟ ಪವನ್

02:39 PM Mar 27, 2020 | Nagendra Trasi |

ಹೈದರಾಬಾದ್/ತೆಲಂಗಾಣ: ಜಗತ್ತನ್ನೇ ಕೋವಿಡ್ 19 ವೈರಸ್ ಬೆಚ್ಚಿಬೀಳಿಸಿದ್ದು, ಇದೀಗ ಕೋವಿಡ್ 19 ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ನಟ, ರಾಜಕಾರಣಿ ಪವನ್ ಕಲ್ಯಾಣ್ ಇದೀಗ ಹೈದರಾಬಾದ್ ನ ನಿವಾಸದಲ್ಲಿ ಸ್ವಯಂ ಆಗಿ ಐಸೋಲೇಶನ್ ನಲ್ಲಿ ಇದ್ದಾರೆ. ಸರಣಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಪವನ್ ಕಲ್ಯಾಣ್, ರಾಜ್ಯ ಮತ್ತು ಕೇಂದ್ರದ ಪರಿಹಾರ ನಿಧಿಗೆ ದೇಣಿಗೆ ನೀಡಿರುವುದಾಗಿ ತಿಳಿಸಿದ್ದಾರೆ.

ಕೋವಿಡ್ 19 ತಡೆಗಟ್ಟಲು ಆಂಧ್ರಪ್ರದೇಶ ಸರ್ಕಾರ ಹಾಗೂ ತೆಲಂಗಾಣ ಸರ್ಕಾರಕ್ಕೆ ತಲಾ 50 ಲಕ್ಷ ರೂಪಾಯಿ ಸಿಎಂ ಪರಿಹಾರ ನಿಧಿಗೆ ನೀಡಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಎರಡು ರಾಜ್ಯ ಸರ್ಕಾರಗಳಿಗೆ ಒಟ್ಟು ಒಂದು ಕೋಟಿ ನೀಡಿದ್ದು, ಪ್ರಧಾನಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಪವನ್ ಕಲ್ಯಾಣ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ತೆಲುಗು ನಟ ನಿತಿನ್ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಕ್ಕೆ ತಲಾ ಹತ್ತು ಲಕ್ಷ ರೂಪಾಯಿ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next