Advertisement

ಕೋವಿಡ್ ಸಂಕಷ್ಟಕ್ಕೆ ಮಿಡಿದ ತಲೈವಾ : ಒಂದು ಕೋಟಿ ರೂ. ನೆರವು ನೀಡಿದ ರಜನಿ

05:16 PM May 14, 2021 | Team Udayavani |

ಚೆನ್ನೈ: ದೇಶದ ಜನತೆಯನ್ನು ತಲ್ಲಣಗೊಳಿಸುತ್ತಿರುವ ಮಹಾಮಾರಿ ಕೋವಿಡ್ ಸೋಂಕಿನ ವಿರುದ್ಧದ ಹೋರಾಟಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕೈ ಜೋಡಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

Advertisement

ರಜನಿ ಪರವಾಗಿ ಅವರ ಮಗಳು ಸೌಂದರ್ಯ ಅವರು ಒಂದು ಕೋಟಿ ಮೌಲ್ಯದ ಚೆಕ್ ಅನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಹಲವು ನಟ-ನಟಿಯರು, ನಿರ್ದೇಶಕರು, ನಿರ್ಮಾಪಕರು ಕೋವಿಡ್ ಸಂದರ್ಭದಲ್ಲಿ ಹಲವು ಬಗೆಗಳಲ್ಲಿ ಸಹಾಯ ಮಾಡುತ್ತಿದ್ದಾರೆ. ಬಾಲಿವುಡ್ ನಟ ಸೋನು ಸೂದ್ ಅವರು ಕಳೆದ ವರ್ಷದಿಂದಲೂ ಕೋವಿಡ್ ನಿಂದಾಗಿ ತೊಂದರೆಗೆ ಸಿಲುಕಿರುವ ಜನರಿಗೆ ಸಹಾಯದ ಹಸ್ತ ನೀಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next